- Advertisement -
- Advertisement -
ಇಂದು ಸಂಜೆ 7 ಗಂಟೆಯ ಬಳಿಕ ಮಂಗಳೂರಿನ ಪ್ರಮುಖ ಬೀಚ್ಳಿಗೆ ಹೋಗುವುದು ಹಾಗೂ ಅಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ.ವಿ ಹೇಳಿದ್ದಾರೆ.
ಕೊರೊನಾ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಪಣಂಬೂರು , ತಣ್ಣೀರುಬಾವಿ , ಸುರತ್ಕಲ್ ಸೇರಿದಂತೆ ಮಂಗಳೂರಿನ ಪ್ರಮುಖ ಬೀಚ್ ಗಳಲ್ಲಿ ಸಂಜೆ 7 ಗಂಟೆ ಬಳಿಕ ಹೊಸ ವರ್ಷಾಚರಣೆಯನ್ನು ನಡೆಸಬಾರದು ಎಂದು ಆದೇಶ ನೀಡಿದ್ದಾರೆ.
ಇನ್ನು ಉಡುಪಿ ಜಿಲ್ಲೆಯಲ್ಲಿಯೂ ಬೀಚ್ ಸೇರಿದಂತೆ ಯಾವುದೇ ಸಾರ್ವಜನಿಕ ಸ್ಥಳದಲ್ಲಿ ಹೊಸ ವರ್ಷಾಚರಣೆ ನಡೆಸಬಾರದು ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ತಿಳಿಸಿದ್ದಾರೆ .
- Advertisement -