- Advertisement -
- Advertisement -
ಕಾರ್ಕಳ: ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಸಿಬ್ಬಂದಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.22 ರ ಶನಿವಾರ ಜಾರ್ಕಳ ಮುಂಡ್ಲಿ ಎಂಬಲ್ಲಿ ವರದಿಯಾಗಿದೆ. ಮೃತರನ್ನು ಕಾರ್ಕಳದ ಕಲ್ಲೊಟ್ಟೆ ನಿವಾಸಿ ಸತೀಶ್(45) ಎಂದು ಗುರುತಿಸಲಾಗಿದೆ.
ಸತೀಶ್ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದಲ್ಲಿ ತಾತ್ಕಾಲಿಕ ನೆಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆತ್ಮಹತ್ಯೆಗೆ ಆರ್ಥಿಕ ಅಡಚಣೆ ಘಟನೆಯೇ ಕಾರಣವೆನ್ನಲಾಗಿದೆ. ಈ ಬಗ್ಗೆ ಅಜೆಕಾರು ಠಾಣೆಯಲ್ಲಿ ಕೇಸುದಾಖಲಾಗಿದೆ.
- Advertisement -