Friday, June 27, 2025
Homeತಾಜಾ ಸುದ್ದಿಬೆಳ್ತಂಗಡಿ: ಮಾ.19ರಂದು ಕನ್ಯಾಡಿ ದಿನೇಶ್‌ ಮನೆಗೆ ಮಾಜಿ ಸಿ.ಎಂ ಸಿದ್ದರಾಮಯ್ಯ ಭೇಟಿ

ಬೆಳ್ತಂಗಡಿ: ಮಾ.19ರಂದು ಕನ್ಯಾಡಿ ದಿನೇಶ್‌ ಮನೆಗೆ ಮಾಜಿ ಸಿ.ಎಂ ಸಿದ್ದರಾಮಯ್ಯ ಭೇಟಿ

spot_img
- Advertisement -
- Advertisement -

ಬೆಳ್ತಂಗಡಿ: ಇತ್ತೀಚೆಗೆ ಬಜರಂಗದಳದ ಮುಖಂಡ ಕೃಷ್ಣ ಯಾನೆ ಕಿಟ್ಟ ಎಂಬವರಿಂದ ಹತ್ಯೆಯಾಗಿದ್ಧಾರೆ ಎನ್ನಲಾದ ಕನ್ಯಾಡಿ ದಿನೇಶ್‌ರವರ ಮನೆಗೆ ಮಾಜಿ ಸಿ.ಎಂ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯರವರು ಮಾ.19ರಂದು ಮಧ್ಯಾಹ್ನ 3 ಗಂಟೆಗೆ ಭೇಟಿ ನೀಡಲಿದ್ದಾರೆ ಎಂದು ಮಾಜಿ ಶಾಸಕ ಕೆ. ವಸಂತ ಬಂಗೇರ ಹೇಳಿದರು.

ಅವರು ಮಾ.16ರಂದು ಬೆಳ್ತಂಗಡಿ ಗುರುನಾರಾಯಣ ಸಭಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಸಿದ್ದರಾಮಯ್ಯರವರು ಇತ್ತೀಚೆಗೆ ಮಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮೃತ ದಿನೇಶ್‌ನ ತಾಯಿ ಪದ್ಮಾವತಿಯವರನ್ನು ನಾನು ಭೇಟಿ ಮಾಡಿಸಿ ಸೂಕ್ತ ಪರಿಹಾರ ಒದಗಿಸಲು ಒತ್ತಾಯಿಸಿದ್ದೆ. ಅದರಂತೆ ಜಿಲ್ಲಾಧಿಕಾರಿಗಳು ಮೃತರ ಕುಟುಂಬಕ್ಕೆ ಪ್ರಥಮ ಹಂತದಲ್ಲಿ ರೂ.4.15ಲಕ್ಷ ಮಂಜೂರುಗೊಳಿಸಿದ್ದಾರೆ. ಇನ್ನೂ ರೂ.4.10 ಲಕ್ಷ ಶೀಘ್ರದಲ್ಲೆ ಬಿಡುಗಡೆಗೊಳ್ಳಲಿದೆ. ಅಲ್ಲದೆ ದಿನೇಶ್‌ರವರ ಪತ್ನಿಗೆ ಸರ್ಕಾರಿ ಉದ್ಯೋಗ ಕೂಡ ದೊರೆಯಬೇಕು ಎಂದರು.

ಇತ್ತಿಚೇಗೆ ಭಜರಂಗದಳದ ಜಿಲ್ಲಾ ಸಂಚಾಲಕ ಭಾಸ್ಕರ ಧರ್ಮಸ್ಥಳ ಪತ್ರಿಕಾಗೋಷ್ಠಿಯಲ್ಲಿ ಆಣೆ ಪ್ರಮಾಣಕ್ಕೆ ಕರೆದು ಸವಾಲು ಹಾಕಿದ ವಿಷಯವನ್ನು ಪ್ರಸ್ತಾಪಿಸಿದ ಬಂಗೇರರು ಭಾಸ್ಕರ್‌ನಂತಹ ನಾಲಾಯಕ್ ವ್ಯಕ್ತಿಗೆ ನನ್ನನ್ನು ಆಣೆಪ್ರಮಾಣಕ್ಕೆ ಕರೆಯುವ ಯೋಗ್ಯತೆಯೇ ಇಲ್ಲ . `ನಾನು ತಪ್ಪು ಮಾಡಿದ್ದಲ್ಲಿ ನನಗೆ ಪ್ರಾಯಶ್ಚಿತ ನೀಡಬೇಕಾಗಿ ಮಂಜುನಾಥ ಸ್ವಾಮಿಯಲ್ಲಿ ಮತ್ತು ಕಾನತ್ತೂರಿನ ನಾಲ್ವರ್ ದೈವಗಳಲ್ಲಿ ಪ್ರಾರ್ಥಿಸುತ್ತೇನೆ. ಅದೇ ರೀತಿ ಭಾಸ್ಕರ ಧರ್ಮಸ್ಥಳ ತಪ್ಪು ಮಾಡಿದಲ್ಲಿ ಅವನಿಗೆ ಪ್ರಾಯಶ್ಚಿತ ನೀಡಬೇಕಾಗಿ ಪ್ರಾರ್ಥಿಸುತ್ತೇನೆ ಎಂದರು.

ಕುವೆಟ್ಟು ಗ್ರಾಮದ ಗುರುವಾಯನಕೆರೆಯಲ್ಲಿರುವ ಕೆರೆಗೆ ದುಷ್ಕರ್ಮಿಗಳು ವಿಷ ಹಾಕಿ ಮೀನುಗಳ ಮಾರಣ ಹೋಮ ನಡೆಸಿದ್ದು, ಯಾವುದೋ ಕೆಮಿಕಲ್ ಸೋರಿಕೆಯಾಗಿ ಈ ರೀತಿಯಾಗಿದೆ ಎಂಬ ಸಂಶಯವ್ಯಕ್ತವಾಗಿದ್ದು, ಇದರ ಬಗ್ಗೆ ಎ.ಸಿ ಹಾಗೂ ಜಿಲ್ಲಾಧಿಕಾರಿಗಳು ತನಿಖೆ ನಡೆಸಿ, ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು. ಅಕ್ರಮ-ಸಕ್ರಮ ಯೋಜನೆಯ ಕಡತ ತಯಾರಿಯಲ್ಲಿ ತಹಶೀಲ್ದಾರ್ ಸಹಿತ ತಾಲೂಕು ಕಚೇರಿಯ ಕೆಲ ಅಧಿಕಾರಿಗಳಿಂದ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿ, ಕಂದಾಯ ಸಚಿವರು, ಜಿಲ್ಲಾಧಿಕಾರಿ ಮತ್ತು ಪುತ್ತೂರು ಸಹಾಯಕ ಆಯುಕ್ತರಿಗೆ ದೂರು ನೀಡಲಿದ್ದೇನೆ. ಮುಂದಿನ ದಿನಗಳಲ್ಲಿ ಕಂದಾಯ ಅಧಿಕಾರಿಗಳು ಇದನ್ನು ಸರಿಪಡಿಸದಿದ್ದಲ್ಲಿ ಬೈಠಕ್ ನಡೆಯುವ ಸಂದರ್ಭದಲ್ಲೇ ಕಾಂಗ್ರೆಸ್ ಪಕ್ಷದ ವತಿಯಿಂದ ತಾಲೂಕು ಕಚೇರಿಗೆ ಮುತ್ತಿಗೆ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಶೈಲೇಶ್ ಕುಮಾರ್ ಕುರ್ತೋಡಿ, ಗ್ರಾಮೀಣ ಅಧ್ಯಕ್ಷ ರಂಜನ್ ಜಿ. ಗೌಡ, ನ್ಯಾಯವಾದಿ ಮನೋಹರ ಕುಮಾರ್ ಇಳಂತಿಲ ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!