- Advertisement -
- Advertisement -
ನವದೆಹಲಿ: ಬಿಜೆಪಿ ಸಂಸದೀಯ ಮಂಡಳಿಯಿಂದ ಮಹಾರಾಷ್ಟ್ರ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಕೈಬಿಡಲಾಗಿದೆ. ಬಿಜೆಪಿ ಸಂಸದೀಯ ಮಂಡಳಿಗೆ ಮಾಜಿ ಸಿಎಂ ಬಿ. ಎಸ್ ಯಡಿಯೂರಪ್ಪ ಅವರನ್ನು ಸೇರ್ಪಡೆ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಮಹಾ ಸಚಿವ ಅಂಕುರ್ ಶರ್ಮಾ ಈ ಆದೇಶ ಹೊರಡಿಸಿದ್ದಾರೆ. ಯಡಿಯೂರಪ್ಪ ಅವರ ಜೊತೆಯಲ್ಲೇ ಸರ್ಬಾನಂದ ಸೋನೋವಾಲ್ ಹಾಗೂ ಕೆ. ಲಕ್ಷ್ಮಣ್ ಅವರನ್ನೂ ಸೇರ್ಪಡೆ ಮಾಡಲಾಗಿದೆ.
ಬಿಜೆಪಿ ಸಂಸದೀಯ ಮಂಡಳಿಯು ಪಕ್ಷದ ಅತ್ಯುನ್ನತ ನಿರ್ಧಾರಗಳನ್ನು ಕೈಗೊಳ್ಳುವ ಮಂಡಳಿಯಾಗಿದ್ದು, ಈ ಮಂಡಳಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಮುಖ್ಯಸ್ಥರಾಗಿದ್ದಾರೆ. ಈ ಮಂಡಳಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡಾ ಇದ್ದಾರೆ. ಈ ಸಮಿತಿಯಲ್ಲಿ ಕರ್ನಾಟಕದವರೇ ಆದ ಬಿ. ಎಲ್. ಸಂತೋಷ್ ಕೂಡಾ ಇದ್ದಾರೆ.
- Advertisement -