Monday, May 20, 2024
Homeಕರಾವಳಿಸುಳ್ಯ; ಅಡಿಕೆಗೆ ಹಳದಿ ರೋಗಕ್ಕೆ ಬಂದಿದ್ದಕ್ಕೆ ಬೇಸತ್ತು ಕೃಷಿಕ ಆತ್ಮಹತ್ಯೆ

ಸುಳ್ಯ; ಅಡಿಕೆಗೆ ಹಳದಿ ರೋಗಕ್ಕೆ ಬಂದಿದ್ದಕ್ಕೆ ಬೇಸತ್ತು ಕೃಷಿಕ ಆತ್ಮಹತ್ಯೆ

spot_img
- Advertisement -
- Advertisement -

ಸುಳ್ಯ; ಅಡಿಕೆಗೆ ಹಳದಿ ರೋಗಕ್ಕೆ ಬಂದಿದ್ದಕ್ಕೆ ಬೇಸತ್ತು ಕೃಷಿಕರೊಬ್ಬರು ಆತ್ಮಹತ್ಯ ಮಾಡಿಕೊಂಡ ಘಟನೆ ಸುಳ್ಯ ಆಲೆಟ್ಟಿ ಗ್ರಾಮದ ಗೂಡಿಂಜದ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಆಲೆಟ್ಟಿ ಗ್ರಾಮದ ಬಡ್ಡಡ್ಕ ಚಳ್ಳಂಗಾರ್‌ ರಾಮಣ್ಣ ಅವರ ಪುತ್ರ ಜಗದೀಶ್‌ (56) ಆತ್ಮಹತ್ಯೆ ಮಾಡಿಕೊಂಡವರು. ಜಗದೀಶ್ ಮನೆಯಿಂದ ಸುಳ್ಯಕ್ಕೆಂದು ಹೋದವರು ಮನೆಗೆ ಮರಳಿ ಬಾರದ ಹಿನ್ನಲೆಯಲ್ಲಿ ಮನೆಯವರು ಜ.4ರಂದು ರಂದು ಆಲೆಟ್ಟಿ ಗ್ರಾಮದ ಗೂಡಿಂಜದ ಅರಣ್ಯ ಪ್ರದೇಶದಲ್ಲಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಅವರು ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದ್ದಾರೆ.

ಇನ್ನು ಆತ್ಮಹತ್ಯೆ ಮಾಡಿಕೊಂಡ ಜಗದೀಶ್‌ ಹೊಟ್ಟೆನೋವಿನಿಂದಲೂ ಬಳಲುತ್ತಿದ್ದರು. ಒಂದು ವರ್ಷದಿಂದ ತೋಟಕ್ಕೆ ಹಳದಿರೋಗ ಬಂದಿದ್ದು, ಎಷ್ಟೇ ಔಷಧ ಸಿಂಪಡಿಸಿದರೂ ನಿಯಂತ್ರಣಕ್ಕೆ ಬಂದಿರಲಿಲ್ಲ. ಇದರಿಂದಾಗಿ ಭವಿಷ್ಯದ ಬಗ್ಗೆ ಚಿಂತೆಗೀಡಾಗಿ ಈ ಕೃತ್ಯ ಎಸಗಿದ್ದಾರೆ ಎಂದು ಶಂಕಿಸಲಾಗಿದೆ.ಇನ್ನು ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

- Advertisement -
spot_img

Latest News

error: Content is protected !!