- Advertisement -
- Advertisement -
ಉಡುಪಿ: ಕೆಲವು ತಿಂಗಳಿನಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಉಡುಪಿ ನಗರಸಭೆಯ ಮಾಜಿ ಸದಸ್ಯ , ಕಾಂಗ್ರೆಸ್ ನ ಹಿರಿಯ ಮುಖಂಡ, ಸಾಮಾಜಿಕ ಕಾರ್ಯಕರ್ತ ಜನಾರ್ದನ ಭಂಡಾರ್ಕರ್ ರವರು ಇವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಕಾಂಗ್ರೆಸ್ ಪಕ್ಷ ಕಟ್ಟುವಲ್ಲಿ ನಿಷ್ಠೆಯನ್ನು ತೋರಿಸಿಕೊಂಡು ಬಂದ ಇವರು ಜಿಲ್ಲಾ ಕಾಂಗ್ರೆಸ್ , ಬ್ಲಾಕ್ ಕಾಂಗ್ರೆಸ್ ನಲ್ಲಿ ಹಲವು ಹುದ್ದೆಗಳಲ್ಲಿ ತಮ್ಮನ್ನ ತಾವು ತೊಡಗಿಸಿಕೊಂಡಿದ್ದರು.ಪಕ್ಷದಲ್ಲಿ ಹಲವಾರು ವರ್ಷಗಳಿಂದ ದುಡಿದವರು ಇವರು.
ಉಡುಪಿ ನಗರದ ಹಲವಾರು ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ಇವರ ನೇತೃತ್ವ ಮುಂಚೂಣಿಯಲ್ಲಿತ್ತು .ಮೃತರು ಪತ್ನಿ , ಇಬ್ಬರು ಪುತ್ರಿಯರು ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ .
- Advertisement -