ದಾವಣೆಗೆರೆ: ಮಾಜಿ ಸಚಿವ ಬಿ ಸಿ ಪಾಟೀಲ್ ಅಳಿಯ ಪ್ರತಾಪ್ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬಿ ಸಿ ಪಾಟೀಲ್ ದೊಡ್ಡ ಮಗಳ ಗಂಡ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಅವರು ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕು ಅರಕೆರೆ ಸಮೀಪದ ಫಾರೆಸ್ಟ್ ಸಮೀಪ ಕಾರು ನಿಲ್ಲಿಸಿ ಕಾರಿನಲ್ಲಿ ವಿಷ ಸೇವಿಸಿದ್ದಾರೆ. ವಿಷ ಸೇವನೆ ಮಾಡಿದ್ದು ವಿಷಯ ತಳಿದ ತಕ್ಷಣ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಿಸಲಾಯ್ತು. ಆದರೆ ಆಸ್ಪತ್ರೆಯಲ್ಲಿ ಮೃತಪಟ್ಟರು.

ಇನ್ನು ಅವರು ವಿಷ ಸೇವಿಸುವ ಮೊದಲು, ನಾನು ವಿಷ ಸೇವಿಸುವುದಾಗಿ ಮನೆಯವರಿಗೆ ಪೋನ್ ಮಾಡಿ ಪ್ರತಾಪ್ ಕುಮಾರ್ ಹೇಳಿದ್ದರು. 3.30 ರ ಸುಮಾರಿಗೆ ಕಾರಿನಲ್ಲಿ ವಿಷ ಸೇವನೆ ಮಾಡಿದ್ದರು. ವಿಷಯ ತಿಳಿದ ತಕ್ಷಣ ಪೊಲೀಸರು ಹೊನ್ನಾಳಿ ಆಸ್ಪತ್ರೆಗೆ ದಾಖಲು ಮಾಡಿದರು. ನಂತರ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಿಸಲಾಯ್ತು. ಆದರೆ ಅಷ್ಟರಲ್ಲಾಗಲೇ ಅವರ ಸ್ಥಿತಿ ಗಂಭೀರವಾಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರ ಪ್ರಾಥಮಿಕ ವರದಿಯಿಂದ ತಿಳಿದುಬಂದಿದೆ.
ಬಿಸಿ ಪಾಟೀಲ್ ಅವರ ದೊಡ್ಡ ಮಗಳು ಸೌಮ್ಯ ಪಾಟೀಲ್ ಅವರ ಗಂಡ ಪ್ರತಾಪ್ ಕುಮಾರ್ ಆಗಿದ್ದು, ಬಿಸಿ ಪಾಟೀಲ್ ಅವರ ಹೆಂಡತಿಯ ಸ್ವಂತ ತಮ್ಮನಾಗಿದ್ದಾರೆ. ತಮ್ಮ ಹಿರಿಯ ಮಗಳನ್ನು ಹೆಂಡತಿಯ ತಮ್ಮನಿಗೆ ಬಿಸಿ ಪಾಟೀಲ್ ಮದುವೆ ಮಾಡಿ ಕೊಟ್ಟಿದ್ದರು. ಅಂದರೆ ಅಕ್ಕನ ಮಗಳನ್ನೇ ಪ್ರತಾಪ್ ಕುಮಾರ್ ಮದುವೆ ಮಾಡಿಕೊಂಡಿದ್ದರು. ಅಳಿಯ ಮೃತಪಟ್ಟ ಮಾಹಿತಿ ತಿಳಿದು ಮರಣೋತ್ತರ ಪರೀಕ್ಷೆ ಹಿನ್ನೆಲೆ ಬಿ ಸಿ ಪಾಟೀಲ್ ಅವರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿದ್ದಾರೆ.