- Advertisement -
- Advertisement -
ನವದೆಹಲಿ: ಒಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಶಾಸಕ ಜನಾರ್ಧನ ರೆಡ್ಡಿ ಅಪರಾಧಿ ಎಂದು ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
ಈ ಅಕ್ರಮ ಗಣಿಗಾರಿಕೆ ಬಿ.ಎಸ್.ಯಡಿಯೂರಪ್ಪ ಆಡಳಿತದಲ್ಲಿ ನಡೆದಿತ್ತು. ಜನಾರ್ಧನ ರೆಡ್ಡಿ ಓಬಳಾಪುರಂ ಮೈನಿಂಗ್ ಕಂಪನಿ ಮುಖ್ಯಸ್ಥರಾಗಿದ್ದರು. ಶ್ರೀನಿವಾಸರೆಡ್ಡಿ ಓಎಂಸಿ ಕಂಪನಿಯ ಎಂಡಿಯಾಗಿದ್ದರು.
ಈ ಕಂಪನಿಗೆ ಗಣಿಗಾರಿಕೆ ಮಂಜೂರಾತಿ ನೀಡುವಲ್ಲಿ ಅಕ್ರಮ ನಡೆದಿತ್ತು. ಅರಣ್ಯ ಇಲಾಖೆ ಗಣಿ ಇಲಾಖೆಯಿಂದಲೂ ಅಕ್ರಮ ನಡೆದಿತ್ತು. ಈ ಪ್ರಕರಣ ಸಂಬಂಧ ಇದೀಗ ಮಾಜಿ ಸಚಿವ ಜನಾರ್ಧನ ರೆಡ್ಡಿ ಅಪರಾಧಿ ಎಂದು ದೆಹಲಿ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದ್ದು, 7 ವರ್ಷ ಜೈಲು ಶಿಕ್ಷೆ ವಿಧಿಸಿದೆ.
- Advertisement -