- Advertisement -
- Advertisement -
ಬೆಂಗಳೂರು: ನಗರದ ಕಿಮ್ಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಕಾರ್ಯನಿರ್ವಹಿಸುತ್ತಿರುವ ಮಾಗಡಿಯ ಮಾಜಿ ಶಾಸಕ ಎಚ್.ಸಿ. ಬಾಲಕೃಷ್ಣ ಅವರ ಪುತ್ರಿಗೆ ಕೋವಿಡ್ ಸೋಂಕು ತಗುಲಿದೆ.
ತಮ್ಮ ಪುತ್ರಿಗೆ ಎರಡು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿತ್ತು. ಪರೀಕ್ಷೆಗೆ ಒಳಪಡಿಸಿದಾಗ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಎಚ್.ಸಿ. ಬಾಲಕೃಷ್ಣ ಟ್ವೀಟ್ ಮಾಡಿದ್ದಾರೆ.
ಎಚ್.ಸಿ. ಬಾಲಕೃಷ್ಣ ಸೋಮವಾರ 500 ಮಂದಿಗೆ ಆಹಾರದ ಕಿಟ್ ವಿತರಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಆಟೋರಿಕ್ಷಾ, ಕಾರು ಮತ್ತಿತರ ವಾಹನಗಳ ಚಾಲಕರಿಗೆ ಈ ಆಹಾರದ ಕಿಟ್ ಅನ್ನು ಮಾಗಡಿಯಲ್ಲಿ ವಿತರಿಸಲಾಗಿತ್ತು. ಮಾಜಿ ಶಾಸಕರ ಪುತ್ರಿಗೂ ಕರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡವರಲ್ಲೂ ಸೋಂಕು ತಗುಲಿರುವ ಆತಂಕ ಮನೆ ಮಾಡಿದೆ.
- Advertisement -