Saturday, August 29, 2026
Homeಕರಾವಳಿಪುತ್ತೂರಿನಲ್ಲಿ ರೈಲ್ವೇ ಮೇಲ್ಸೇತುವೆ ಕಾಮಗಾರಿಗೆ ಚಾಲನೆ

ಪುತ್ತೂರಿನಲ್ಲಿ ರೈಲ್ವೇ ಮೇಲ್ಸೇತುವೆ ಕಾಮಗಾರಿಗೆ ಚಾಲನೆ

- Advertisement -
- Advertisement -

ಬೆಂಗಳೂರು: ಪುತ್ತೂರಿನ ವಿವೇಕಾನಂದ ಕಾಲೇಜು ರಸ್ತೆಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ರೈಲ್ವೇ ಮೇಲ್ಸೇತುವೆ ಕಾಮಗಾರಿಗೆ ಇಂದು ಚಾಲನೆ ನೀಡಲಾಯಿತು.

ಸುಮಾರು 5.66 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕಾಮಗಾರಿಗೆ ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್ ಅಡಿಗಲ್ಲು ಹಾಕಿ ಚಾಲನೆ ನೀಡಿದರು.

ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಭಾರತಮಾತೆ ಮತ್ತು ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್, ಮಾಜಿ ಶಾಸಕ ಸಂಜೀವ ಮಠಂದೂರು, ಸಾಜ ರಾಧಾಕೃಷ್ಣ ಆಳ್ವ, ಚನಿಲ ತಿಮ್ಮಪ್ಪ ಶೆಟ್ಟಿ, ಜೀವಂದರ್ ಜೈನ್, ಆರ್.ಸಿ. ನಾರಾಯಣ್, ರೈಲ್ವೇ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement -

Latest News

error: Content is protected !!