Friday, June 27, 2025
Homeತಾಜಾ ಸುದ್ದಿಮೈಸೂರು ಅಂಬಾರಿ ಹೊತ್ತಿದ್ದ ಆನೆ ಅರ್ಜುನನ ಸ್ಮಾರಕಕ್ಕೆ ಶಂಕುಸ್ಥಾಪನೆ

ಮೈಸೂರು ಅಂಬಾರಿ ಹೊತ್ತಿದ್ದ ಆನೆ ಅರ್ಜುನನ ಸ್ಮಾರಕಕ್ಕೆ ಶಂಕುಸ್ಥಾಪನೆ

spot_img
- Advertisement -
- Advertisement -

ಹಾಸನ : ಕಾಡಾನೆ ಸೆರೆ ಕಾರ್ಯಾಚರಣೆಯಲ್ಲಿ ಹುತಾತ್ಮನಾದ ಮೈಸೂರು ಅಂಬಾರಿ ಹೊತ್ತಿದ್ದ ಆನೆ ಅರ್ಜುನನ ಸ್ಮಾರಕಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಹಾಸನ ಸಕಲೇಶಪುರ ತಾಲೂಕಿನ ಯಸಳೂರು ಅರಣ್ಯದ ದಬ್ಬಳ್ಳಿಕಟ್ಟೆಯ ನೆಡುತೋಪಿನಲ್ಲಿ ಅರ್ಜುನನ ಸ್ಮಾರಕಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ಈ ವೇಳೆ ಮಾತನಾಡಿದ ಅವರು ಕಾಡಾನೆಗಳು ನಾಡಿಗೆ ಬರಲು ಕಾರಣವೇನು ಎಂಬ ಬಗ್ಗೆ ಸಮಗ್ರ ಅಧ್ಯಯನ ಮಾಡಿ, ಶಾಶ್ವತ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ ಎಂದರು.ಆನೆ ಹಾವಳಿ ತಪ್ಪಿಸಲು ಆಗಸ್ಟ್ 12ರಂದು ವಿಶ್ವ ಆನೆಗಳ ದಿನದಂದು ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ ನಡೆಸಲಾಗುವುದು. ಈ ಸಮ್ಮೇಳನದಲ್ಲಿ ವಿಶ್ವಾದ್ಯಂತದಿಂದ ತಜ್ಞರು ಆಗಮಿಸಲಿದ್ದಾರೆ ಎಂದರು.

ಈ ಸಮ್ಮೇಳನದಲ್ಲಿ ವನ್ಯಜೀವಿ- ಮಾನವ ಸಂಘರ್ಷ ನಿಯಂತ್ರಣಕ್ಕೆ ಯಾವ ಯಾವ ದೇಶದಲ್ಲಿ ಯಾವ ರೀತಿಯ ಪರಿಹಾರ ಮಾರ್ಗಗಳನ್ನು ಕಂಡುಕೊಳ್ಳಲಾಗಿದೆ. ಅತ್ಯುತ್ತಮ ರೂಢಿಗಳನ್ನು ನಮ್ಮಲ್ಲಿ ಕೂಡ ಅಳವಡಿಸಿಕೊಳ್ಳುವುದು ಹೇಗೆ ಎಂಬ ಬಗ್ಗೆ ಚಿಂತನ ಮಂಥನ ನಡೆಸಲಾಗುವುದು ಎಂದು ತಿಳಿಸಿದರು.

- Advertisement -
spot_img

Latest News

error: Content is protected !!