- Advertisement -


- Advertisement -
ಬೆಂಗಳೂರು: ಮುಂಗಾರು ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರಕೃತಿ ವಿಕೋಪದ ನಿರ್ವಹಣೆಗಾಗಿ ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ.
ಆರೋಗ್ಯ ಇಲಾಖೆ ಸಚಿವ ಯು.ಟಿ. ಖಾದರ್ ಅವರಿಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಕೊಡಗು ಜಿಲ್ಲೆಗಳ ಉಸ್ತುವಾರಿ ವಹಿಸಲಾಗಿದೆ.
ಮುಂಗಾರು ಮಳೆಯ ಹಿನ್ನಲೆಯಲ್ಲಿ ಅಗತ್ಯ ತುರ್ತು ಕ್ರಮಗಳನ್ನು ಕೈಗೊಳ್ಳಲು ಸಚಿವರಿಗೆ ತಾತ್ಕಾಲಿಕವಾಗಿ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ.
ಸದ್ಯ ಪೂರ್ಣ ಪ್ರಮಾಣದ ಸಚಿವ ಸಂಪುಟ ರಾಜ್ಯದಲ್ಲಿ ಇಲ್ಲದೇ ಇರುವ ಹಿನ್ನೆಲೆಯಲ್ಲಿ ಒಬ್ಬೊಬ್ಬ ಸಚಿವರಿಗೆ ಮೂರ್ನಾಲ್ಕು ಜಿಲ್ಲೆಗಳ ಜವಾಬ್ದಾರಿ ವಹಿಸಲಾಗಿದೆ.
- Advertisement -


