- Advertisement -
- Advertisement -
ಮಂಗಳೂರು: ಮಂಗಳಾದೇವಿ ಬಳಿಯ ಮೋರ್ಗನ್ ಗೇಟ್ ಸಮೀಪ ಒಂದೇ ಕುಟುಂಬಕ್ಕೆ ಸೇರಿದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ. ಮಕ್ಕಳಿಗೆ ವಿಷ ನೀಡಿ ತಂದೆ ತಾಯಿ ನೇಣಿಗೆ ಶರಣಾಗಿದ್ದಾರೆ. ಮೃತರು ಬಾಗಲಕೋಟೆಯವರು.
ನಾಗೇಶ್ ಶೆರಗುಪ್ಪಿ(30), ವಿಜಯಲಕ್ಷ್ಮಿ (26), ಮಕ್ಕಳಾದ ಸ್ವಪ್ನ (4), ಸಮರ್ಥ್ (4) ಮೃತ ಪಟ್ಟವರು. ಪತಿ, ಪತ್ನಿ ಮತ್ತು ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದ್ದು, ಈ ಆತ್ಮಹತ್ಯೆಗೆ ಕಾರಣ ಏನು ಎಂದು ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಮಂಗಳೂರು ಸಿಟಿ ಪೋಲಿಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

- Advertisement -