- Advertisement -
- Advertisement -
ಉಡುಪಿ: ಇಲ್ಲಿನ ಪ್ರಧಾನ ಸಿಜೆ ಮತ್ತು ಜೆ ಎಂ ಎಫ್ ಸಿ ನ್ಯಾಯಾಲಯವು, ಕಾರಿಗೆ ಲಾರಿ ಡಿಕ್ಕಿ ಹೊಡೆದು ನಾಲ್ವರ ಸಾವಿಗೆ ಕಾರಣನಾದ ಅಪರಾಧಿ ಲಾರಿ ಚಾಲಕನಿಗೆ ಆರು ತಿಂಗಳು ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ .
ಪ್ರಕರಣಕ್ಕೆ ಸಂಬಂಧಿಸಿ ಪೂರಕ ಸಾಕ್ಷಿ ಹಾಗೂ ವಾದ ವಿವಾದಗಳನ್ನು ಆಲಿಸಿದ ನ್ಯಾಯಾಲಯವು ಲಾರಿ ಚಾಲಕ ಸಂತೋಷ್ ಎಸ್ ಅಂಬಿಗ ನ ಮೇಲಿನ ಅರೋಪ ಸಾಬೀತಾದ ಹಿನ್ನಲೆಯಲ್ಲಿ ಅರೋಪಿಗೆ ನ್ಯಾಯಧೀಶರಾದ ದೀಪರವರು 6 ತಿಂಗಳುಗಳ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
2014 ರ ಡಿಸೆಂಬರ್ 7 ರಂದು ರಾತ್ರಿ ಪೆರ್ಡೂರು ಬಳಿಯ ಪಾಡಿಗಾರ್ ಬಳಿ ಉಡುಪಿಯಿಂದ ಸೋಮೇಶ್ವರ ಕಡೆಗೆ ಹೋಗುತ್ತಿದ್ದ ಕಾರಿಗೆ ಅತೀ ವೇಗ ಹಾಗೂ ಅಜಾಗರುಕತೆಯಿಂದ ಬಂದ ಲಾರಿ ಡಿಕ್ಕಿ ಹೊಡೆದಿತ್ತು .
ಇದರ ಪರಿಣಾಮ ಕಾರಿನಲ್ಲಿದ್ದ ಮನೋಹರ ಭಕ್ತ , ಮನೋರಮ ಭಕ್ತ ಸ್ವಾತಿ , ಕುಮಾರಿ ಸಂಜನಾ ಸೇರಿದಂತೆ ನಾಲ್ವರು ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದರು . ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು .
- Advertisement -