Friday, June 27, 2025
Homeಅಪರಾಧಮಾರ್ಬಲ್‌ ವ್ಯವಹಾರದಲ್ಲಿ ಕೋಟಿ ಹಣ ಹೂಡಿಕೆ ಮಾಡಿಸಿ ವಂಚನೆ: ಪ್ರಕರಣ ದಾಖಲು

ಮಾರ್ಬಲ್‌ ವ್ಯವಹಾರದಲ್ಲಿ ಕೋಟಿ ಹಣ ಹೂಡಿಕೆ ಮಾಡಿಸಿ ವಂಚನೆ: ಪ್ರಕರಣ ದಾಖಲು

spot_img
- Advertisement -
- Advertisement -

ಮಂಗಳೂರು: 2.50 ಕೋಟಿ ರೂ ಅನ್ನು ಮಾರ್ಬಲ್‌ ವ್ಯವಹಾರದಲ್ಲಿ ಹೂಡಿಕೆ ಮಾಡಿಸಿ, ಲಾಭ ಮಾಡಿಕೊಡುವುದಾಗಿ ನಂಬಿಸಿ ವಂಚಿಸಿರುವ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದ ಆರೋಪಿ ಮಹಮ್ಮದ್‌ ಶರೀಫ್ ಎಲ್‌. ಈತ ಎಂ. ನಾಸೀರ್‌ ಅವರಿಗೆ ವಂಚಿಸಿದ್ದಾಗಿ ದೂರಲಾಗಿದೆ.

ಘಟನೆಯ ವಿವರ: ಕಾಸರಗೋಡಿನಲ್ಲಿ ರಾಜಸ್ತಾನದಿಂದ ಮಾರ್ಬಲ್‌ ತಂದು ವ್ಯಾಪಾರ ಮಾಡುತ್ತೇನೆ. ಅದರಲ್ಲಿ ಹೂಡಿಕೆ ಮಾಡಿದರೆ ಲಾಭ ಕೊಡುತ್ತೇನೆ ಎಂದು ಎಂ.ನಾಸೀರ್‌ ಅವರನ್ನು ಶರೀಫ್ ನಂಬಿಸಿದ್ದ ಎನ್ನಲಾಗಿದೆ.

ಆರೋಪಿಯು ಹಂತ ಹಂತವಾಗಿ ನಾಸೀರ್‌ ಅವರಿಂದ ಒಟ್ಟು 2.50 ಕೋ.ರೂ.ಗಳನ್ನು ನಗದಾಗಿ ಪಡೆದುಕೊಂಡಿದ್ದ. ಹಣ ಪಡೆದುಕೊಂಡ ಬಗ್ಗೆ ದಾಖಲಾತಿ ಕೇಳಿದಾಗ ತಾವಿಬ್ಬರು ಒಂದೇ ಊರಿನವರಾಗಿದ್ದು ದಾಖಲಾತಿಯನ್ನು ಮುಂದಕ್ಕೆ ಯಾವುದಾದರೂ ಮಾಡಬಹುದು ಎಂದು ಹೇಳಿದ್ದ. ಆದರೆ ಮೂರು ತಿಂಗಳು ಕಳೆದ ಬಳಿಕ ವ್ಯಾಪಾರ ಲೆಕ್ಕ ಮಾಡಿ ಲಾಭ ಮತ್ತು ದಾಖಲಾತಿಯನ್ನು ಒಟ್ಟಿಗೆ ಕೊಡುವುದಾಗಿಯೂ ನಂಬಿಸಿದ್ದ. ನಾಸೀರ್‌ ಅವರು ಬಳಿಕ ಅಬುಧಾಬಿಗೆ ತೆರಳಿದ್ದು, ಆಗಾಗ್ಗೆ ಫೋನ್‌ ಮಾಡಿ ಹಣದ ಬಗ್ಗೆ ವಿಚಾರಿಸಿದ್ದರು. ಅನಂತರ ಊರಿಗೆ ಬಂದು ಆರೋಪಿಯ ಮನೆಗೆ ಹೋಗಿ ಹಣ ಕೇಳಿದಾಗ ನೀಡಿರಲಿಲ್ಲ. ಬಳಿಕ ಅವಾಚ್ಯ ಶಬ್ದಗಳಿಂದ ಬೈದು, ಜೀವಬೆದರಿಕೆ ಹಾಕಿದ್ದಾನೆ.

ಈ ಕುರಿತಂತೆ ಮಂಗಳೂರು ದಕ್ಷಿಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರದ ಕುರಿತು ತನಿಖೆ ನಡೆಸಲಾಗುತ್ತಿದೆ.

- Advertisement -
spot_img

Latest News

error: Content is protected !!