- Advertisement -
- Advertisement -
ಗದಗ: ಮತ್ತೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ್ರೇ, ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಬಸ್ ಪಾಸ್ ವಿತರಿಸೋದಾಗಿ ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.
ಗದಗದಲ್ಲಿ ಈ ಬಗ್ಗೆ ಮಾತನಾಡಿದ ಸಾರಿಗೆ ಸಚಿವ ಬಿ.ಶ್ರೀರಾಮುಲು ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ್ರೆ, ಮಹಿಳೆಯರಿಗೆ ಉಚಿತ ಬಸ್ ಪಾಸ್ ವಿತರಿಸೋದಾಗಿ ಘೋಷಿಸಿದ್ದಾರೆ.
ಅಂದಹಾಗೇ ರಾಜ್ಯ ಸರ್ಕಾರ ಕಟ್ಟಡ ಕಾರ್ಮಿಕರು, ಗಾರ್ಮೆಂಟ್ಸ್ ನೌಕರರಿಗೆ ರಿಯಾಯಿತಿ ದರದಲ್ಲಿ ಉಚಿತ ಬಸ್ ಪಾಸ್ ವಿತರಣೆ ಮಾಡುತ್ತಿದೆ. ಈಗ ಮತ್ತೆ ರಾಜ್ಯಾದ್ಯಂತ ಮಹಿಳೆಯರಿಗೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ್ರೆ ಉಚಿತ ಬಸ್ ಪಾಸ್ ವಿತರಣೆ ಮಾಡುವುದಾಗಿ ಹೇಳಿದ್ದಾರೆ.
- Advertisement -