ಬೆಳ್ತಂಗಡಿ: ಇಲ್ಲಿನ ಗಂಡಿಬಾಗಿಲು ಸಮೀಪದ ಸಿಯೋನ್ ಆಶ್ರಮದಲ್ಲಿ 2024 ಜುಲೈ 14 ಭಾನುವಾರದಂದು ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆ ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಶಿಬಿರವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು.

ದಂತ ವೈದ್ಯೆ ಡಾ.ಅಪೂರ್ವ, ಯೆನಪೋಯದ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರದ ವೈದ್ಯಕೀಯ ಅಧಿಕಾರಿ ಡಾ.ಅಜ್ಮಲ್, ಹಾಗೂ ಯೆನಪೋಯ ವೈದ್ಯರುಗಳ ತಂಡ ಶಿಬಿರಾರ್ಥಿಗಳನ್ನು ತಪಾಸಣೆ ನಡೆಸಿದರು. 140ಕ್ಕೂ ಅಧಿಕ ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆದು ಕೊಂಡರು. ಯೆನಪೋಯ ಸಂಸ್ಥೆಯ ವೈದ್ಯಕೀಯ ಶಿಬಿರದ ಸಂಯೋಜಕರಾದ ಶ್ರೀಮತಿ ಗಾಯತ್ರಿ ವಿ ಪಿ ಯವರು, ಸಿಯೋನ್ ಆಶ್ರಮದ ಟ್ರಸ್ಟಿ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ ಯವರು, ಸಂಸ್ಥೆಯ ವೈದ್ಯರಾದ ಡಾ. ಗೋಪಿಕೃಷ್ಣನ್ ರವರು, ಆಡಳಿತ ಮಂಡಳಿಯವರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಸಂಸ್ಥೆಯ ಸಿಬ್ಬಂದಿ ಶ್ರೀಮತಿ ದಿನಾವತಿಯವರು ಕಾರ್ಯಕ್ರಮವನ್ನು ನಿರೂಪಿಸಿದರು.
