- Advertisement -
- Advertisement -
ಬೆಳಗಾವಿ: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ 200 ಯುನಿಟ್ ವಿದ್ಯುತ್ ನೀಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವ ಕುಮಾರ್ ಹೇಳಿದರು.
ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿ, ಉಚಿತ ವಿದ್ಯುತ್ ನೀಡುವುದಾಗಿ ಹೇಳಿ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ. ಇನ್ಮುಂದೆ ನೀವ್ಯಾರು ಕರೆಂಟ್ಗೆ ದುಡ್ಡು ಕಟ್ಟಬೇಕಿಲ್ಲ. ಕಾಂಗ್ರೆಸ್ ಪಕ್ಷ ಜನರ ಸಮಸ್ಯೆ, ನೋವು ಅಭಿಪ್ರಾಯ ಸಂಗ್ರಹಿಸುತ್ತಿದೆ. ನಿಮಗೆ ಶಕ್ತಿ ಕೊಡಬೇಕು. ಬೆಳಕು ಕೊಡಬೇಕು ಅಂತಾ ನಾವೆಲ್ಲಾ ಇಲ್ಲಿಗೆ ಬಂದಿದ್ದೇವೆ. ಜನರ ಸಂಕಷ್ಟ ಪರಿಹಾರ ಮಾಡುವುದೇ ಈ ಪ್ರಜಾಧ್ವನಿ ಯಾತ್ರೆ. ಬುದ್ಧ, ಬಸವ ಮನೆ ಬಿಟ್ಟ ಘಳಿಗೆ, ಮಹಾತ್ಮ ಗಾಂಧಿ ನಾಯಕತ್ವ ವಹಿಸಿಕೊಂಡ ಘಳಿಗೆಯಲ್ಲಿ ಕಾರ್ಯಕ್ರಮ ಪ್ರಾರಂಭ ಮಾಡಿದ್ದೇವೆ ಎಂದರು.
- Advertisement -