Saturday, May 11, 2024
Homeಚಿಕ್ಕಮಗಳೂರುಈಚಲು ಮರದಲ್ಲಿ ಮೂಡಿದ ಗಣೇಶನ ರೂಪ: ವಿಸ್ಮಯ ತುಂಬಿಕೊಳ್ಳಲು ಮುಗಿ ಬಿದ್ದ ಜನ

ಈಚಲು ಮರದಲ್ಲಿ ಮೂಡಿದ ಗಣೇಶನ ರೂಪ: ವಿಸ್ಮಯ ತುಂಬಿಕೊಳ್ಳಲು ಮುಗಿ ಬಿದ್ದ ಜನ

spot_img
- Advertisement -
- Advertisement -

ಚಿಕ್ಕಮಗಳೂರು: : ಈಚಲು ಮರದಲ್ಲಿ ಗಣಪ ರೂಪವೊಂದು ಕಾಣಿಸಿಕೊಂಡ ಘಟನೆ ಚಿಕ್ಕಮಗಳೂರು ನಗರದ ಪಟಾಕಿ ಗ್ರೌಂಡ್ ಬಳಿ ನಡೆದಿದೆ.ಹೊಲದಲ್ಲಿರುವ ಒಂದು ಹೊಲದ ಈಚಲುಮರದಲ್ಲಿ ಗಣಪನನೇ ಹೋಲುವ ಸೊಂಡಿಲು, ಕಣ್ಣು, ಕೈಗಳು, ದೇಹ ಎಲ್ಲವನ್ನೂ ಹೊಂದಿರುವ ಆಕೃತಿ ಮೂಡಿದೆ. ಈ ವಿಷಯ ಗೊತ್ತಾಗುತ್ತಿದ್ದಂತೆ, ಜನರು ತಂಡೋಪತಂಡವಾಗಿ ಈಚಲುಮರ ಗಣಪನ ದರ್ಶನಕ್ಕೆ ಮುಗಿಬಿದ್ದು ಪೂಜೆ ಸಲ್ಲಿಸಲು ಪ್ರಾರಂಭಿಸಿದ್ದಾರೆ.

ನಗರದಲ್ಲಿ ನಾಲ್ಕೈದು ಗಣಪತಿ ದೇವಸ್ಥಾನಗಳಿದ್ದರೂ ಕೂಡ ಎಲ್ಲವೂ ಪಶ್ಚಿಮ ದಿಕ್ಕಿಗೆ ಮುಖ ಮಾಡಿವೆ. ಆದರೆ, ಈ ಈಚಲು ಮರದಲ್ಲಿ ಉದ್ಭವಿಸಿರುವ ಗಣಪತಿ ಪೂರ್ವ ದಿಕ್ಕಿಗೆ ಮುಖ ಮಾಡಿ ಹುಟ್ಟಿರೋದು ಸ್ಥಳೀಯರು ಹಾಗೂ ಆಸ್ತಿಕರ ತೀವ್ರ ತರವಾದ ಭಕ್ತಿಗೆ ಕಾರಣವಾಗಿದೆ. ಕಂಪ್ಲೀಟ್ ಗಣೇಶನನ್ನೇ ಹೋಲುವ ಮೂರ್ತಿಯನ್ನ ನೋಡಿ ಜನ ನಾ ಮುಂದು-ತಾ ಮುಂದು ಅಂತ ಗಣಪನಿಗೆ ಪೂಜೆ ಸಲ್ಲಿಸಿ ಬೇಡಿಕೊಳ್ಳಲು ಆರಂಭಿಸಿದ್ದಾರೆ.      

- Advertisement -
spot_img

Latest News

error: Content is protected !!