Monday, April 29, 2024
Homeಕರಾವಳಿಉಡುಪಿದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಗಣೇಶ ಚತುರ್ಥಿಗೆ ಸೆ. 19 ರಂದು ರಜೆ ನೀಡುವುದು ಡಿಸಿಗಳ...

ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಗಣೇಶ ಚತುರ್ಥಿಗೆ ಸೆ. 19 ರಂದು ರಜೆ ನೀಡುವುದು ಡಿಸಿಗಳ ವಿವೇಚನೆಗೆ

spot_img
- Advertisement -
- Advertisement -

ಬೆಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗಣೇಶ ಚತುರ್ಥಿ ಹಬ್ಬಕ್ಕೆ ರಜೆ ನೀಡುವುದನ್ನು ಜಿಲ್ಲಾಧಿಕಾರಿಗಳ‌ ವಿವೇಚನೆಗೆ ಬಿಡಲಾಗಿದೆ.

ಸೆಪ್ಟೆಂಬರ್ 18 ರ ಬದಲು 19 ರಂದು ರಜೆ ನೀಡುವ ಬಗ್ಗೆ ಸ್ಥಳೀಯ ಪರಿಸ್ಥಿತಿಗಳಿಗೆ ಅನುಗುಣವಾಗಿ ಜಿಲ್ಲಾಧಿಕಾರಿಗಳು ತಮ್ಮ ಹಂತದಲ್ಲಿಯೇ ತೀರ್ಮಾನ ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ.

ಈ ಕುರಿತಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಧಿಕಾರಿಗಳಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ ಅಧಿಕೃತ ಸೂಚನೆ ನೀಡಲಾಗಿದೆ.

ರಾಜ್ಯಾದ್ಯಂತ ಸೆಪ್ಟೆಂಬರ್ 18 ರಂದು ರಾಜ್ಯ ಸರ್ಕಾರ ಸಾರ್ವತ್ರಿಕ ರಜೆ ಘೋಷಣೆ ಮಾಡಿದ್ದು, ಸೆಪ್ಟೆಂಬರ್ 18 ರ ಬದಲಾಗಿ 19 ರಂದು ರಜೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರು ಆಗ್ರಹಿಸಿದ್ದರು.

- Advertisement -
spot_img

Latest News

error: Content is protected !!