Thursday, May 2, 2024
Homeಕರಾವಳಿಮಂಗಳೂರಿನ ಬಂದರು ಪ್ರದೇಶದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರ ಬಂಧನ

ಮಂಗಳೂರಿನ ಬಂದರು ಪ್ರದೇಶದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರ ಬಂಧನ

spot_img
- Advertisement -
- Advertisement -

ಮಂಗಳೂರಿನ ಬಂದರು ಪ್ರದೇಶದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ.ಮಂಗಳೂರಿನ ಕಸಬಾ ಬೆಂಗ್ರೆ ನಿವಾಸಿಗಳಾದ ಅಬ್ದುಲ್ ರಹೀಮ್ ಅಲಿಯಾಸ್ ಚಪ್ಪೆ ತನ್ನಿ ರಹೀಮ್ ಮತ್ತು ಮೊಹಮದ್ ಅಶ್ರಫ್ ಅಲಿಯಾಸ್ ಕರಿಯ ಬಂಧಿತರು. ಬಂಧಿತರಿಂದ 1,67,000 ರೂ. ಮೌಲ್ಯದ 3 ಕೆಜಿ 378 ಗ್ರಾಂ ಗಾಂಜಾ , 4,940 ರೂ ನಗದು ಮತ್ತು ಸ್ಕೂಟರ್ ವಶ ಪಡಿಸಿಕೊಳ್ಳಲಾಗಿದೆ.

ನಗರ ಪೊಲೀಸ್ ಆಯುಕ್ತರ ನಿರ್ದೇಶನದ ಮೇರೆಗೆ ಉತ್ತರ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬಂದಿಗಳು ಕಾರ್ಯಾಚರಣೆ ನಡೆಸಿದ್ದಾರೆ.ಇನ್ನು ಆರೋಪಿಗಳ ವಿರುದ್ಧ NDPS ಅನ್ವಯ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

- Advertisement -
spot_img

Latest News

error: Content is protected !!