- Advertisement -
- Advertisement -
ಉಡುಪಿ : ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸಿದ ಹಿನ್ನೆಲೆ ಉಡುಪಿ ಸೆನ್ ಅಪರಾಧ ಠಾಣೆಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಉಡುಪಿ ನಗರದ ಸಿಟಿ ಬಸ್ ನಿಲ್ದಾಣದ ಬಳಿ ಗಾಂಜಾ ಸೇವಿಸುತ್ತಿದ್ದ ಉದ್ಯಾವರ ಸಂಪಿಗೆನಗರದ ದೀಪಕ್ ರೈ(22) ಹಾಗೂ ಕಾರ್ಕಳ ಹೊಸ್ಮಾರು ನಿವಾಸಿ ಮುಹಮ್ಮದ್ ಇರ್ಷಾದ್(25) ಎಂಬವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಇನ್ನು ಕಾಪು ಪೊಲೀಸರು ಮಲ್ಲಾರು ಗ್ರಾಮದ ಸ್ವಾಗತ ನಗರ ಸಮೀಪ ಶಬರೀಶ ಎಂಬಾತನನ್ನು ವಶಕ್ಕೆ ಪಡೆದು ಮಣಿಪಾಲ ಕೆಎಂಸಿ ಪೊರೆನ್ಸಿಕ್ ವಿಭಾಗದ ಮುಂದೆ ಹಾಜರು ಪಡಿಸಿದ್ದು, ಮೇ ೨೪ರಂದು ವೈದ್ಯರ ದೃಢ ಪತ್ರ ದಲ್ಲಿ ಇವರು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.
- Advertisement -