- Advertisement -
- Advertisement -
ಬೆಳ್ತಂಗಡಿ : ಗಾಂಜಾ ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಚಿಕ್ಕಮಗಳೂರಿನ ಬಣಕಲ್ನಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

ಬೆಳ್ತಂಗಡಿ ಪೊಲೀಸ್ ಠಾಣಾ ಅಕ್ರ 73/18 ಕಲಂ. 8.(C) ಜೊತೆಗೆ 20(B) ಎನ್.ಡಿ.ಪಿ.ಎಸ್ ಆಕ್ಟ್ ಗಾಂಜಾ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿದ ವಾರಂಟು A2 ಆರೋಪಿಯಾದ ಅಂಜುಮಖಾನ್(41) ಎಂಬಾತನನ್ನು ಫೇ.4 ರಂದು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಬಳಿಯಿಂದ ಬೆಳ್ತಂಗಡಿ ಪೊಲೀಸ್ ಉಪ ನಿರೀಕ್ಷಕರಾದ ಹರೀಶ್.ಎಮ್.ಆರ್ ಮತ್ತು ಅರ್ಜುನ್ ರವರ ನೇತೃತ್ವದಲ್ಲಿ ವೃಷಭ್ ಹಾಗೂ ಬಸವರಾಜ್ ರವರು ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿಗೆ ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಲಾಗಿದೆ.
- Advertisement -