Friday, May 10, 2024
Homeಕರಾವಳಿಬೆಳ್ತಂಗಡಿ : ಗಾಂಜಾ ಸಾಗಾಟ ಮಾಡುತ್ತಿದ್ದವರು ಪೊಲೀಸರ ಬಲೆಗೆ: ಇಬ್ಬರ ಬಂಧನ, ವಾಹನ ಮತ್ತು ಗಾಂಜಾ...

ಬೆಳ್ತಂಗಡಿ : ಗಾಂಜಾ ಸಾಗಾಟ ಮಾಡುತ್ತಿದ್ದವರು ಪೊಲೀಸರ ಬಲೆಗೆ: ಇಬ್ಬರ ಬಂಧನ, ವಾಹನ ಮತ್ತು ಗಾಂಜಾ ವಶಕ್ಕೆ

spot_img
- Advertisement -
- Advertisement -

ಬೆಳ್ತಂಗಡಿ : ಗಾಂಜಾ ಸಾಗಾಟ ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಪೊಲೀಸರ ತಂಡ ಯಶಸ್ವಿಯಾಗಿದ್ದಾರೆ. ಪೊಲೀಸ್ ವೃತ್ತ ನಿರೀಕ್ಷಕರಾದ ಶಿವಕುಮಾರ ಬಿ ರವರು ಸಿಬ್ಬಂದಿಯೊಂದಿಗೆ ಬೆಳ್ತಂಗಡಿ ತಾಲೂಕು ತೆಂಕಕಾರಂದೂರು ಗ್ರಾಮದ ಉದಯಗಿರಿ ಎಂಬಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಗೂಡ್ಸ್ ಅಟೋರಿಕ್ಷಾ ವಾಹನದಲ್ಲಿ ಗಾಂಜಾ ಸಾಗಿಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.  ಕಾಸರಗೋಡಿನ  ವರ್ಕಾಡಿ ಗ್ರಾಮ ನಿವಾಸಿಗಳಾದ  ಮಹಮ್ಮದ್ ಅಶ್ರಫ್ (34) ,ಅಬ್ದುಲ್ ಲತೀಪ್ ಕೆ (36)  ಬಂಧಿತ ಆರೋಪಿಗಳು.

ಬಂಧಿತರಿಂದ 30,000/- ರೂಪಾಯಿ ಮೌಲ್ಯದ 805 ಗ್ರಾಂ ತೂಕದ ಮಾದಕ ಗಾಂಜಾ, ಸಾಗಾಟ ಮಾಡಲು ಉಪಯೋಗಿಸಿದ ಅಂದಾಜು ರೂ 2,00,000/- ಮೌಲ್ಯದ ಗೂಡ್ಸ್ ಅಟೋರಿಕ್ಷಾ ಅವನ್ನು ವಶಕ್ಕೆ ಪಡೆದಿದ್ದಾರೆ.  ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರಾದ  ಋಷಿಕೇಶ್ ಸೋನಾವಣೆ ಐ.ಪಿ.ಎಸ್ ಹಾಗೂ ಹೆಚ್ಚುವರಿ ಪೊಲೀಸ್ ಆಧೀಕ್ಷಕರಾದ ಡಾ. ಕುಮಾರಚಂದ್ರ ರವರ ನಿರ್ದೇಶನದಂತೆ, ಮಾನ್ಯ ಬಂಟ್ವಾಳ ಡಿ.ವೈಎಸ್.ಪಿ ಪ್ರಥಾಪ್ ಸಿಂಗ್ ತೊರಾಟ್ ರವರ ಸೂಚನೆಯಂತೆ ಬೆಳ್ತಂಗಡಿ ವೃತ್ತ ನಿರೀಕ್ಷಕರಾದ ಶ್ರೀ ಶಿವಕುಮಾರ ಬಿ ರವರು ಹಾಗೂ ವೇಣೂರು ಠಾಣಾ ಪಿ.ಎಸ್.ಐ  ಸೌಮ್ಯ ಜೆ ಮತ್ತು ವೃತ್ತ ಕಛೇರಿಯ ಅಪರಾಧ ಪತ್ತೆ ತಂಡದ ಸಿಬ್ಬಂದಿ ಇಬ್ರಾಹಿಂ,ಚೌಡಪ್ಪ, ಸುನಿಲ್ ಹಪ್ಪಳ್ಳಿ, ಮತ್ತು ಜೀಪು ಚಾಲಕ ಮಹಮ್ಮದ್ ಅಸೀಫ್, ಲಾರೆನ್ಸ್ ಹಾಗೂ ವೇಣೂರು ಠಾಣಾ ಸಿಬ್ಬಂದಿ ಎ.ಎಸ್.ಐ ವೆಂಕಟೇಶ್ ನಾಯ್ಕ್, ರವೀಂದ್ರ, ಪಂಪಾಪತಿ, ಕೇಶವತಿ, ಶಶಿಕುಮಾರ್, ಶ್ರೀನಿವಾಸ, ತ್ರಿಮೂರ್ತಿ, ಹನುಮಂತ, ಲತಾರವರು ಪತ್ತೆ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು .

- Advertisement -
spot_img

Latest News

error: Content is protected !!