- Advertisement -
- Advertisement -
ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಅರಳಿಹಳ್ಳಿ ಗ್ರಾಮದ ಪ್ರಸಿದ್ಧ ಸೂಳೆಕಲ್ ಬೃಹನ್ಮಠದ ಗವಿಸಿದ್ದೇಶ್ವರ ಸ್ವಾಮೀಜಿಯವರ ಎರಡನೇ ಪುತ್ರ ಪ್ರಸಾದ್ (19) ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.
ಕರೊನಾ ಸೋಂಕಿಗೆ ಒಳಗಾಗಿದ್ದ ಪ್ರಸಾದ್ ಕಳೆದ 10 ದಿನದಿಂದ ಕೊಪ್ಪಳದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಪ್ರಸಾದ್ ಕೊನೆಯುಸಿರೆಳೆದಿದ್ದಾರೆ.
ಕೊಪ್ಪಳ ಜಿಲ್ಲೆಯಲ್ಲಿ 19 ವರ್ಷ ವಯಸ್ಸಿನೊಳಗೆ ಮೃತಪಟ್ಟ ಮೊದಲ ಯುವಕನಾಗಿದ್ದು, ಹೆಮ್ಮಾರಿಯ ಅಟ್ಟಹಾಸಕ್ಕೆ ಕೊಪ್ಪಳ ಜನತೆ ಬೆಚ್ಚಿಬಿದ್ದಿದ್ದಾರೆ.
- Advertisement -