Thursday, April 25, 2024
Homeಕರಾವಳಿಮಂಗಳೂರು: ಆಟವಾಡುತ್ತಿದ್ದಾಗ ಶಾಲು ಕುತ್ತಿಗೆಗೆ ಸುತ್ತಿಕೊಂಡು 13 ವರ್ಷದ ಬಾಲಕಿ ಸಾವು

ಮಂಗಳೂರು: ಆಟವಾಡುತ್ತಿದ್ದಾಗ ಶಾಲು ಕುತ್ತಿಗೆಗೆ ಸುತ್ತಿಕೊಂಡು 13 ವರ್ಷದ ಬಾಲಕಿ ಸಾವು

spot_img
- Advertisement -
- Advertisement -

ಉಳ್ಳಾಲ: ಕುತ್ತಿಗೆಗೆ ಶಾಲು ಸಿಲುಕಿ ಬಾಲಕಿಯೋರ್ವಳು ತನ್ನ ಮನೆಯೊಳಗೆ ಕಟ್ಟಿದ ಶಾಲುವಿನಲ್ಲಿ ಆಟವಾಡುತ್ತಿದ್ದಾಗ ಕುತ್ತಿಗೆಗೆ ಬಿಗಿದುಕೊಂಡು ಮೃತಪಟ್ಟಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೋಟೆಕಾರು ಎಂಬಲ್ಲಿ ನಡೆದಿದೆ.

ಚೆರ್ಕಳ ಎಡನೀರು ಮಠದ ಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿನಿಯಾಗಿದ್ದ ಮೇಘಶ್ರೀ (13) ಸಾವನ್ನಪ್ಪಿದ ಬಾಲಕಿ.

ಕಾಸರಗೋಡು ಎಡನೀರು ನಿವಾಸಿ ಕೃಷ್ಣ ನಾಯ್ಕ್ ಎಂಬವರ ಪುತ್ರಿ ಮೇಘಶ್ರೀ, ಕೋಟೆಕಾರಿನ ಮಾವನ ಮನೆಯಲ್ಲಿ ಒಂದು ತಿಂಗಳಿನಿಂದ ಇದ್ದಳು. ಹಾಡು ಹಾಕಿ ನೃತ್ಯ ಮಾಡುವ ಹವ್ಯಾಸ ಹೊಂದಿದ್ದ ಈಕೆ, ಕುತ್ತಿಗೆಗೆ ಸಿಲುಕಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಪ್ರಾಥಮಿಕ ತನಿಖೆಯಲ್ಲಿ ಬಾಲಕಿ ಮೇಘಶ್ರೀ ಸಾವಿನಲ್ಲಿ ಸಂಶಯ ವ್ಯಕ್ತವಾದ ಹಿನ್ನೆಲೆಯಲ್ಲಿ ಮನೆಮಂದಿಯನ್ನು ಹಾಗೂ ಹೆತ್ತವರನ್ನು ಉಳ್ಳಾಲ ಠಾಣಾ ಪೊಲೀಸರು ವಿಚಾರಣೆಗೆ ತೆಗೆದುಕೊಂಡಿದ್ದರು. ಆ ಬಳಿಕ ಸ್ಥಳ ಮಹಜರು ವೇಳೆ ಬಾಲಕಿ ಕೋಣೆಯ ಬಾಗಿಲು ಹಾಕಿದ್ದು, ಬಾಗಿಲು ಒಡೆದು ನೋಡಿದಾಗ ಸಾವನ್ನಪ್ಪಿರುವ ಪ್ರಕರಣ ಬೆಳಕಿಗೆ ಬಂದಿರುವುದು ಗೊತ್ತಾಗಿದೆ.

ಮೇಘಶ್ರೀ ತನ್ನ ಬಣ್ಣ ಕಪ್ಪು ಎಂಬ ಜಿಗುಪ್ಸೆಯನ್ನು ಹೊಂದಿದ್ದಳು. ಇದರಿಂದ ಬೇಸತ್ತು ಆತ್ಮಹತ್ಯೆ ನಡೆಸಿರುವ ಶಂಕೆಯೂ ಒಂದು ಹಂತದಲಿ ವ್ಯಕ್ತವಾಗಿದೆ.

- Advertisement -
spot_img

Latest News

error: Content is protected !!