Friday, June 27, 2025
Homeಕರಾವಳಿಮಂಗಳೂರು ;ಯುವತಿ ಚಲಾಯಿಸುತ್ತಿದ್ದ ಸ್ಕೂಟಿಗೆ ಮೀನಿನ ವಾಹನ ಡಿಕ್ಕಿ; ಯುವತಿ ಸ್ಥಳದಲ್ಲೇ ಸಾವು

ಮಂಗಳೂರು ;ಯುವತಿ ಚಲಾಯಿಸುತ್ತಿದ್ದ ಸ್ಕೂಟಿಗೆ ಮೀನಿನ ವಾಹನ ಡಿಕ್ಕಿ; ಯುವತಿ ಸ್ಥಳದಲ್ಲೇ ಸಾವು

spot_img
- Advertisement -
- Advertisement -

ಮಂಗಳೂರು ;ಯುವತಿ ಚಲಾಯಿಸುತ್ತಿದ್ದ ಸ್ಕೂಟಿಗೆ ಮೀನಿನ ವಾಹನ ಡಿಕ್ಕಿಯಾಗಿ ಯುವತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಂತೂರು ಜಂಕ್ಷನ್ ಬಳಿ ಶಾಂತಿ ಕಿರಣ ಬಿಲ್ಡಿಂಗಿನ ಎದುರು ನಡೆದಿದೆ. ಕೋಡಿಕಲ್‌ನ ಕ್ರಿಸ್ತಿ ಕ್ರಾಸ್ತಾ(27) ಮೃತ ಯುವತಿ.

ಭಾನುವಾರ ಸಂಜೆ 3.30 ರ ಸುಮಾರಿಗೆ ಕ್ರಿಸ್ತಿ ಕ್ರಾಸ್ತಾ ರವರು ನಂತೂರು ಜಂಕ್ಷನ್ ನಿಂದ ಪಂಪ್ ವೆಲ್ ಕಡೆಗೆ ಹೋಗುತ್ತಿರುವಾಗ ಹಸಿ ಮೀನು ಸಾಗಿಸುವ ವಾಹನ ಕ್ರಿಸ್ತಿ ಚಲಾಯಿಸುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ  ಯುವತಿ ಮೀನಿನ ವಾಹನದ  ಹಿಂಬದಿ ಚಕ್ರಕ್ಕೆ ಸಿಲುಕಿಕೊಂಡು ಸ್ಥಳದಲ್ಲೇ  ಸಾವನ್ನಪ್ಪಿದ್ದಾರೆ. ಮೀನಿನ ವಾಹನ ಚಾಲಕನ ಅಜಾಗೃತೆಯ ಚಾಲನೆಯೇ ಘಟನೆ ಕಾರಣವೆಂದು ಹೇಳಲಾಗಿದೆ. ಈ ಬಗ್ಗೆ ಸಂಚಾರ ಪೂರ್ವ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

- Advertisement -
spot_img

Latest News

error: Content is protected !!