Thursday, April 25, 2024
Homeತಾಜಾ ಸುದ್ದಿಜ್ಯೋತಿಷಿಯ ಮಾತು ನಂಬಿ ಪ್ರಿಯಕರನನ್ನು ವಿಷ ಹಾಕಿದ ಕೊಂದ ಪ್ರೇಯಸಿ; ಕೇರಳದಲ್ಲಿ ನಡೆಯಿತೊಂದು ಅಮಾನವೀಯ ಘಟನೆ

ಜ್ಯೋತಿಷಿಯ ಮಾತು ನಂಬಿ ಪ್ರಿಯಕರನನ್ನು ವಿಷ ಹಾಕಿದ ಕೊಂದ ಪ್ರೇಯಸಿ; ಕೇರಳದಲ್ಲಿ ನಡೆಯಿತೊಂದು ಅಮಾನವೀಯ ಘಟನೆ

spot_img
- Advertisement -
- Advertisement -

ಕೇರಳ ; ಜ್ಯೋತಿಷಿ ಮಾತು ಕೇಳಿ ಪ್ರೇಯಸಿಯೊಬ್ಬಳು ತನ್ನ ಪ್ರಿಯಕರನಿಗೆ ವಿಷಪ್ರಾಶನ ಮಾಡಿ ಸಾಯಿಸಿರುವ ಘಟನೆ ಕೇರಳದ ತಿರುವನಂತಪುರಂ ನಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ರೇಡಿಯಾಲಜಿ ವಿದ್ಯಾರ್ಥಿ ಶರೋನ್ ರಾಜ್ (23) ಎಂದು ಗುರುತಿಸಲಾಗಿದೆ. ಗ್ರೀಷ್ಮಾ ಕೊಲೆಗೈದ ಪ್ರೇಯಸಿ.


ಗ್ರೀಷ್ಮಾ ಶರೋನ್ ರಾಜ್ ಜೊತೆ ರಿಲೇಶ್ ನ ಶಿಪ್ ನಲ್ಲಿದ್ದಳು, ಅಲ್ಲದೇ ಜ್ಯೋತಿಷಿ ಒಬ್ಬರು ಗ್ರೀಷ್ಮಾ ಜಾತಕದ ಪ್ರಕಾರ, ಆಕೆಯ ಮೊದಲ ಪತಿ ಸಾಯುತ್ತಾನೆ ಎಂದು ಹೇಳಿದ್ದರು. ಇದರಿಂದ ಭಯಗೊಂಡು ಆತನೊಂದಿಗೆ ಬ್ರೇಕ್ ಮಾಡಿಕೊಳ್ಳಲು ಪ್ರಯತ್ನಿಸಿದ್ದಾಳೆ.


ಗ್ರೀಷ್ಮಾ ಮತ್ತು ಶರೋನ್ ಒಂದು ವರ್ಷದಿಂದ ರಿಲೇಶನ್ ಶಿಪ್‍ನಲ್ಲಿದ್ದರು. ಅಲ್ಲದೇ ಮನೆಯವರು ಗ್ರೀಷ್ಮಾಗೆ ಬೇರೆಯವರೊಂದಿಗೆ ಮದುವೆ ನಿಶ್ಚಯ ಮಾಡಿದ್ದರು. ಫೆಬ್ರವರಿಯಿಂದ ಗ್ರೀಷ್ಮಾ ಹಾಗೂ ಶರೋನ್ ನಡುವೆ ಕೆಲವು ಮನಸ್ತಾಪಗಳು ಪ್ರಾರಂಭವಾಗಿದೆ. ಹೀಗಿದ್ದರೂ ಇಬ್ಬರೂ ರಿಲೇಶನ್ ಶಿಪ್ ಮಂದುವರೆಸಿದ್ದರು. ಆದರೆ ಇತ್ತೀಚೆಗೆ ಇವರಿಬ್ಬರ ನಡುವೆ ಮನಸ್ತಾಪ ಹೆಚ್ಚಾಗಿದ್ದರಿಂದ ಶರೋನ್ ಅನ್ನು ಬಿಡುವ ಸಲುವಾಗಿ, ವಿಷ ನೀಡಿ ಕೊಲ್ಲಲು ನಿರ್ಧರಿಸಿದ್ದಾಳೆ. ಮೊದಲಿಗೆ ಸಮಾಧಾನದಿಂದ ಮೃದು ಸ್ವಭಾವದಿಂದ ಬ್ರೇಕ್ ಅಪ್ ಮಾಡಿಕೊಳ್ಳೋಣ ಎಂದು ತಿಳಿಸಿದ್ದಾಳೆ. ಆದರೆ ಇದಕ್ಕೆ ಶರೋನ್ ರಾಜ್ ನಿರಾಕರಿಸಿದ್ದಾನೆ.


ಕೊಲೆ ಮಾಡಲು ಮೊದಲೇ ಪ್ರೀ ಪ್ಲಾನ್ ಮಾಡಿದ್ದ ಗ್ರೀಷ್ಮಾ ಅಕ್ಟೋಬರ್ 14 ರಂದು ಶರೋನ್ ರಾಜ್ ಅನ್ನು ಮನೆಗೆ ಕರೆಸಿಕೊಂಡಿದ್ದಳು. ಈ ವೇಳೆ ಕಷಾಯದೊಂದಿಗೆ ಕೀಟನಾಶಕವನ್ನು ಬೆರೆಸಿ ಕುಡಿಸಿದ್ದಾಳೆ. ಇದಾದ ಬಳಿಕ ಪ್ರಿಯಕರ ವಾಂತಿ ಮಾಡಿಕೊಳ್ಳಲು ಆರಂಭಿಸಿದ್ದಾನೆ. ಬಳಿಕ ಸ್ನೇಹಿತನೊಂದಿಗೆ ತೆರಳಿದ್ದಾನೆ. ಬಳಿಕ ಆತನನ್ನು ಸ್ನೇಹಿತ ಆಸ್ಪತ್ರೆಗೆ ದಾಖಲಿಸಿದ್ದಾನೆ.  ಅಕ್ಟೋಬರ್ 25 ರಂದು ಶರೋನ್ ತಿರುವನಂತಪುರಂ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಇನ್ನು ಆತನ ಸಾವಿಗೆ ಪ್ರೇಯಸಿಯೇ ಕಾರಣ ಎಂದು ಶರೋನ್ ಕುಟುಂಬಸ್ಥರು ಆರೋಪಿಸಿದ್ದಾರೆ. ಇದೀಗ ಕೊಲೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

- Advertisement -
spot_img

Latest News

error: Content is protected !!