Thursday, June 25, 2026
Homeಕರಾವಳಿಮಂಗಳೂರುಬೆಳ್ತಂಗಡಿ: 2012 ರಲ್ಲಿ ಧರ್ಮಸ್ಥಳಕ್ಕೆ ಹೋಗಿದ್ದ ಯುವತಿ ನಾಪತ್ತೆ: ಸಹೋದರರಿಂದ SIT ಗೆ ದೂರು

ಬೆಳ್ತಂಗಡಿ: 2012 ರಲ್ಲಿ ಧರ್ಮಸ್ಥಳಕ್ಕೆ ಹೋಗಿದ್ದ ಯುವತಿ ನಾಪತ್ತೆ: ಸಹೋದರರಿಂದ SIT ಗೆ ದೂರು

- Advertisement -
- Advertisement -

ಬೆಳ್ತಂಗಡಿ : ಬಂಟ್ವಾಳ ತಾಲೂಕಿನ ಕಾವಳ ಮುಡೂರು ಗ್ರಾಮದ ನಿವಾಸಿ ಹೇಮಾಲತಾ (17) ಎಂಬ ಯುವತಿಯೊಬ್ಬಳು 2012ರಲ್ಲಿ ಧರ್ಮಸ್ಥಳಕ್ಕೆ ಹೋದಾಕೆ ಮನೆಗೆ ಮನೆಗೆ ಹಿಂತಿರುಗದೆ ನಾಪತ್ತೆಯಾಗಿರುವ ಬಗ್ಗೆ ಆಕೆಯ ಸಹೋದರರಾದ ನಿತಿನ್ ಹಾಗೂ ನಿತೇಶ್ ಎಂಬವರು ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಆಗಮಿಸಿ ಆ.14 ರಂದು ದೂರು ನೀಡಿದ್ದಾರೆ.

ಎಸ್.ಐ.ಟಿ ಕಚೇರಿಯಲ್ಲಿ ದೂರು ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ನಿತಿನ್ ತನ್ನ ತಂಗಿ ನಾಪತ್ತೆಯಾಗಿ‌ 13 ವರ್ಷಗಳಾದರೂ ಯಾವುದೆ ಮಾಹಿತಿ ಲಭ್ಯವಾಗಿಲ್ಲ.

ಇದೀಗ ಎಸ್.ಐ.ಟಿ ತಂಡ ನಾಪತ್ತೆಯಾದವರ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿರುವುದು ತಿಳಿದು ಬಂದಿದ್ದು ಈ ಹಿನ್ನಲೆಯಲ್ಲಿ ಎಸ್.ಐ‌ಟಿ ಕಚೇರಿಗೆ ಬಂದು ದೂರನ್ನು ನೀಡಿರುವುದಾಗಿ ತಿಳಿಸಿದರು.
2012 ರಲ್ಲಿ 17ವರ್ಷ ಪ್ರಾಯದ ತನ್ನ ತಂಗಿ ಹೇಮಾಲತಾ ಮನೆಯ ಸಮೀಪದ ಮಹಿಳೆಯೊಂದಿಗೆ ಧರ್ಮಸ್ಥಳಕ್ಕೆ ಬಂದಿದ್ದರು. ಆದರೆ ಆಕೆ ಮತ್ತೆ ಹಿಂತಿರುಗಿ ಬರಲಿಲ್ಲ. ಈ ಬಗ್ಗೆ ಆಕೆಯನ್ನು ಕರೆದೊಯ್ದ ಮಹಿಳೆಯನ್ನು ವಿಚಾರಿಸಿದರೆ ಆಕೆ ನನ್ನೊಂದಿಗೆ ಬಂದಿಲ್ಲ ಎಂಬ ಉತ್ತರ ನೀಡುತ್ತಿದ್ದಾಳೆ ಈ ಬಗ್ಗೆ ಪೂಂಜಾಲಕಟ್ಟೆ ಪೊಲೀಸರಿಗೆ ಸಂದರ್ಭದಲ್ಲಿ ದೂರನ್ನು ನೀಡಿದ್ದೆವು ಅವರು ದೂರನ್ನು ಸ್ವೀಕರಿಸಿದ್ದರು. ಹಲವು ಬಾರಿ ಠಾಣೆಗೆ ತೆರಳಿ ವಿಚಾರಿಸಿದರೂ ಯಾವುದೇ ಮಾಹಿತಿಗಳು ಲಭಿಸಿರಲಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಇದೀಗ ಎಸ್.ಐ.ಟಿ ತಂಡ ನಡೆಸುತ್ತಿರುವ ತನಿಖೆಯ ಬಗ್ಗೆ ಮಾಹಿತಿ ತಿಳಿದು ದೂರು ನೀಡಲು ಬಂದಿದ್ದೇನೆ. ನಮಗೆ ಯಾರ ಮೇಲೆಯೂ ಅನುಮಾನವಿಲ್ಲ. ಆಕೆಯನ್ನು ಕರೆದೊಯ್ದ ಮಹಿಳೆಯ ಬಗ್ಗೆಯೇ ಅನುಮಾನವಿದೆ ಆಕೆಯನ್ನು ವಿಚಾರಣೆಗೆ ಒಳಪಡಿಸಿದರೆ ಸತ್ಯ ಹೊರಬರಬಹುದು ಎಂಬುದು ನಮ್ಮ ಭಾವನೆಯಾಗಿದೆ ಎಂದು ತಿಳಿಸಿದ್ದಾರೆ.

ಎಂಟನೆ ತರಗತಿಯ ವರೆಗೆ ಕಲಿತು ಬಳಿಕ ಮನೆಯಲ್ಲಿದ್ದು ಬೀಡಿ ಕಟ್ಟುತ್ತಿದ್ದಳು ಆಕೆಯ ಕೈಯಲ್ಲಿ ಮೊಬೈಲ್ ಕೂಡಾ ಇರಲಿಲ್ಲ. ನಮ್ಮಿಂದ ಸಾಧ್ಯವಾದ ರೀತಿಯಲ್ಲೆಲ್ಲ ಹುಡುಕಿದ್ದೇವೆ ಆದರೆ ಯಾವುದೇ ಮಾಹಿತಿ ಸಿಕ್ಕಿರಲಿಲ್ಲ. ಎಂದು ತಮ್ಮ ನೋವನ್ನು ತೋಡಿಕೊ‌ಂಡಿದ್ದಾರೆ.

ಈ ದೂರನ್ನು ಎಸ್.ಐ.ಟಿ ಅಧಿಕಾರಿಗಳು ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ನೀಡಲು ಸೂಚನೆ ನೀಡಿದ ಮೇರೆಗೆ ಸಹೋದರ ನಿತಿನ್ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದು ತನಿಖೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ದಕ್ಷಿಣ ಕನ್ನಡ ಎಸ್ಪಿ ಡಾ.ಅರುಣ್.ಕೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Latest News

error: Content is protected !!