Thursday, June 4, 2026
Homeತಾಜಾ ಸುದ್ದಿಜ.18ರಿಂದ ರಾಜ್ಯದಲ್ಲಿ 'ಗೋಹತ್ಯೆ ನಿಷೇಧ' ಕಾಯ್ದೆ ಜಾರಿ : ಅಧಿಸೂಚನೆ ಹೊರಡಿಸಿದ ಸರ್ಕಾರ

ಜ.18ರಿಂದ ರಾಜ್ಯದಲ್ಲಿ ‘ಗೋಹತ್ಯೆ ನಿಷೇಧ’ ಕಾಯ್ದೆ ಜಾರಿ : ಅಧಿಸೂಚನೆ ಹೊರಡಿಸಿದ ಸರ್ಕಾರ

- Advertisement -
- Advertisement -

ಬೆಂಗಳೂರು : ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ತೀವ್ರ ವಿರೋಧದ ನಡುವೆಯೂ ಅಂಗೀಕರಿಸಲ್ವಟ್ಟಿದ್ದಂತ ಗೋ ಹತ್ಯೆ ನಿಷೇಧ ಕಾಯ್ದೆ, ವಿಧಾನಪರಿಷತ್ ನಲ್ಲಿ ಮಂಡನೆಗೂ ಮುನ್ನವೇ ಅನಿರ್ಧಿಷ್ಟಾವಧಿಗೆ ಮುಂದೂಡಿಕೆಯಾಗಿ, ಮಂಡನೆಯಾಗಿರಲಿಲ್ಲ. ಇಂತಹ ಮಸೂದೆಯನ್ನು ಸುಗ್ರೀವಾಜ್ಞೆಯ ಮೂಲಕ ರಾಜ್ಯ ಸರ್ಕಾರ ಜಾರಿಗೆ ತಂದಿತ್ತು. ಇದೀಗ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಜನವರಿ 18ರಿಂದ ರಾಜ್ಯದಲ್ಲಿ ಜಾರಿಗೆ ತರಲು ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಈ ಕುರಿತಂತೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಜನವರಿ 18ರಿಂದ ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ಬರಲಿದೆ. ಗೋ ಹತ್ಯೆ ನಿಷೇಧಗೊಳಿಸಲಾಗುತ್ತಿದೆ. ಸುಗ್ರೀವಾಜ್ಞೆಯ ಮೂಲಕ ಜಾರಿಗೆ ತಂದಿರುವಂತ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಇದೀಗ ಅಧಿಸೂಚನೆ ಹೊರಡಿಸುವ ಮೂಲಕ, ಅಧಿಕೃತವಾಗಿ ಜಾರಿಗೊಳಿಸಿದೆ.

- Advertisement -

Latest News

error: Content is protected !!