- Advertisement -
- Advertisement -
ಮಂಗಳೂರು: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಮಂಗಳೂರು ನಗರ ಉತ್ತರ ಮಂಡಲ ಬಿಜೆಪಿ ಯುವ ಮೋರ್ಛಾ ವತಿಯಿಂದ ಗೋ ಪೂಜಾ ಕಾರ್ಯಕ್ರಮ ಆಯೋಜಿಸಲಾಗಿತ್ತು.ಕಾರ್ಯಕ್ರಮದಲ್ಲಿ ಸಂಸದ ನಳೀನ್ ಕುಮಾರ್ ಕಟೀಲ್ ಭಾಗವಹಿಸಿ ಗೋ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಂಗಳೂರು ಉತ್ತರ ಶಾಸಕ ವೈ. ಭರತ್ ಶೆಟ್ಟಿ, ಮಂಡಲ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ, ಜಿಲ್ಲಾ ಕಾರ್ಯದರ್ಶಿ ಪೂಜಾ ಪೈ, ಮಂಡಲ ಯುವ ಮೋರ್ಛಾ ಅಧ್ಯಕ್ಷ ಭರತ್ ರಾಜ್ ಕೃಷ್ಣಾಪುರ, ರಂದೀಪ್ ಕಾಂಚನ್, ಮಂಗಳೂರು ಮಹಾನಗರ ಪಾಲಿಕೆ ಉಪ ಮೇಯರ್ ಸುನೀತಾ ಮತ್ತು ಶಕ್ತಿ ಕೇಂದ್ರ ಪ್ರಮುಖರು ಉಪಸ್ಥಿತರಿದ್ದರು
- Advertisement -