- Advertisement -
- Advertisement -
ಬೆಳ್ತಂಗಡಿ: ಕೊಯ್ಯೂರು ಗ್ರಾಮದ ಮಲೆಬೆಟ್ಟು ನಿವಾಸಿ ವಿಶ್ವನಾಧ ಗೌಡ ಎಂಬವರ ಮನೆಯಲ್ಲಿ ಯಾರೂ ಇಲ್ಲದವೇಳೆ ಮನೆಗೆ ನುಗ್ಗಿದ ಕಳ್ಳರು ಮನೆಯಲ್ಲಿದ್ದ ಚಿನ್ನಾಭರಣಗಳನ್ನು ದೋಚಿದ ಘಟನೆ ನಡೆದಿದೆ.
ಮನೆಯವರು ಹೊರಗೆ ಹೋಗಿದ್ದ ವೇಳೆ ಮನೆಯ ಬೀಗ ಒಡೆದು ಮನೆಗೆ ನುಗ್ಗಿ ಕಪಾಟಿನಲ್ಲಿ ಇರಿಸಲಾಗಿದ್ದ 42ಗ್ರಾಂ ತೂಕದ 1.26ಲಕ್ಷ ಮೌಲ್ಯದ ಚಿನ್ನಾಭರಣಗಳನ್ಬು ಹಾಗೂ 500ರೂ ನಗದನ್ನು ಅಪಹರಿಸಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
- Advertisement -