- Advertisement -
- Advertisement -
ಮಂಗಳೂರು; ತಾನು ಕೆಲಸಕ್ಕಿದ್ದ ಮನೆಯಿಂದ ಹೋಮ್ ನರ್ಸ್ ಕರಿಮಣಿ ಸರ ಎಗರಿಸಿದ ಘಟನೆ ಮಂಗಳೂರಿನ ಕದ್ರಿ ಬಿ ಗ್ರಾಮದ ಬಾರೆಬೈಲ್ ಎಂಬಲ್ಲಿ ನಡೆದಿದೆ. ಕಾವ್ಯ ಕರಿಮಣಿ ಸರ ಕದ್ದ ಹೋಂ ನರ್ಸ್ .
ಮಂಡ್ಯ ಮೂಲದ ಕಾವ್ಯ ಅ.6 ರಿಂದ 30ರ ಮಧ್ಯೆ ಹೋಂ ನರ್ಸ್ ಆಗಿದ್ದರು. ಬಳಿಕ ಕಾವ್ಯ ಅನಾರೋಗ್ಯದ ನೆಪ ಹೇಳಿ ಹೋಗಿದ್ದರು. ಈ ಸಂದರ್ಭ ಸುಮಾರು 2 ಲಕ್ಷ ರೂ.ಮೌಲ್ಯದ 35 ಗ್ರಾಂ ತೂಕದ ಕರಿಮಣಿ ಸರ ಕಾಣೆಯಾಗಿದೆ.
ಈ ಬಗ್ಗೆ ಕಾವ್ಯಳನ್ನು ಸಂಪರ್ಕಿಸಿದಾಗ ಆಕೆ ಸರಿಯಾಗಿ ಸ್ಪಂದಿಸಲಿಲ್ಲ. ಈ ಹಿನ್ನೆಲೆ ಆಕೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲು ಮಾಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
- Advertisement -