ಮಂಗಳೂರು: ಜಿಮ್ ನಿಂದ ನಡೆದುಕೊಂಡು ಹೋಗುತ್ತಿದ್ದ ಯುವಕನ ಸರ ಕದ್ದು ಅಪರಿಚಿತ ಪರಾರಿಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ನಗರದ ಕಾವೂರು ನಿವಾಸಿ ಹರ್ಷಿತ್ ರೈ ಅವರು ಶುಕ್ರವಾರ ಸಂಜೆ 5 ಗಂಟೆ ವೇಳೆ ಗಾಂಧಿನಗರದಲ್ಲಿರುವ ಜಿಮ್ಗೆ ಮನೆಯಿಂದ ನಡೆದುಕೊಂಡು ಹೋಗುತ್ತಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ಕುತ್ತಿಗೆಗೆ ಕೈ ಹಾಕಿ ಚಿನ್ನದ ಸರವನ್ನು ಎಳೆದು ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಸುಮಾರು 25-30 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಸ್ಕೂಟರ್ನಲ್ಲಿ ಬಂದು ಹಿಂಬದಿಯಿಂದ ಅವರ ಕುತ್ತಿಗೆಗೆ ಕೈ ಹಾಕಿ ಸುಮಾರು 16 ಗ್ರಾಂ ತೂಕದ ಚಿನ್ನದ ಸರವನ್ನು ಎಳೆದಿದ್ದಾನೆ.