- Advertisement -
- Advertisement -
ಚಿಕ್ಕಮಗಳೂರು:ಕೆಎಸ್ ಆರ್ ಟಿಸಿ ಬಸ್ ನಲ್ಲಿ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ಸುಮಾರು 220 ಗ್ರಾಂ. ಚಿನ್ನಾಭರಣವನ್ನು ವಶ ಪಡಿಸಿಕೊಂಡಿರುವ ಘಟನೆ ಮಾಗಡಿ ಚೆಕ್ಪೋಸ್ಟ್ ನಲ್ಲಿ ನಡೆದಿದೆ.
ಬೆಂಗಳೂರಿನಿಂದ-ಚಿಕ್ಕಮಗಳೂರಿಗೆ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 220 ಗ್ರಾಂ.ತೂಕದ ಚಿನ್ನದ ತಾಳಿ, ಮಾಲೆ, ಬ್ರೇಸ್ಲೆಟ್, ಬಳೆ, ಸರ, ಉಂಗುರಗಳನ್ನು ಪೊಲೀಸರು ಹಾಗೂ ಚುನಾವಣಾಧಿಕಾರಿಗಳ ತಂಡ ವಶಕ್ಕೆ ಪಡೆದುಕೊಂಡಿದೆ. ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಬರುತ್ತಿದ್ದ ವ್ಯಕ್ತಿಯೊಬ್ಬರು ಈ ಚಿನ್ನಾಭರಣಗಳನ್ನು ಸಾಗಿಸುತ್ತಿದ್ದು, ಆಭರಣಗಳಿಗೆ ಸಂಬಂಧಿಸಿದ ಯಾವುದೇ ದಾಖಲೆ ನೀಡದ ಹಿನ್ನೆಲೆಯಲ್ಲಿ ಆಭರಣಗಳನ್ನು ಸೀಜ್ ಮಾಡಲಾಗಿದೆ. ಈ ಚಿನ್ನಾಭರಣಗಳ ಒಟ್ಟು ಮೌಲ್ಯ 13.20 ಲಕ್ಷ ಎಂದು ಎಸ್ಎಸ್ಟಿ ಅಧಿಕಾರಿಗಳ ತಂಡ ಅಂದಾಜಿಸಿದೆ. ಘಟನೆ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಭರಣಗಳ ಮೂಲದ ಬಗ್ಗೆ ತನಿಖೆ ನಡೆಸಲಾಗುತ್ತಿದೆ.
- Advertisement -