- Advertisement -
- Advertisement -
ಸುಬ್ರಮಣ್ಯ: ಕುಕ್ಕೆ ಸುಬ್ರಮಣ್ಯದಲ್ಲಿ ಯಾತ್ರಾರ್ಥಿಯೊಬ್ಬರ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರುವ ಘಟನೆ ನಡೆದಿದೆ.
ಮೈಸೂರು ವಿವೇಕಾನಂದನಗರ ನಿವಾಸಿ ನಂಜಮ್ಮ ಅವರು ಸುಬ್ರಮಣ್ಯ ಸ್ವಾಮಿಯ ದರ್ಶನಕ್ಕಾಗಿ ಕುಕ್ಕೆಗೆ ಆಗಮಿಸಿದ್ದರು. ಈ ವೇಳೆ ಸ್ನಾನಘಟ್ಟಕ್ಕೆ ಸ್ನಾನಕ್ಕೆಂದು ತೆರಳಿದ್ದರು. ವಾಪಾಸ್ಸು ಬರುತ್ತಿದ್ದ ವೇಳೆ ಅವರ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವಾಗಿದೆ.
ಸುಮಾರು 75 ಗ್ರಾಂ ತೂಕದ ಚಿನ್ನಾಭರಣ ಕಳವಾಗಿದೆ ಎಂದು ಅವರು ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಹಾಡಹಗಲೇ ಇಷ್ಟು ದೊಡ್ಡ ಕ್ಷೇತ್ರದಲ್ಲಿ ಚಿನ್ನಾಭರಣ ಕಳವಾಗಿರೋದಕ್ಕೆ ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದಾರೆ. ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿದ್ದಾರೆ.
- Advertisement -