- Advertisement -
- Advertisement -
ಕಾರ್ಕಳ: ಮನೆಯೊಂದಕ್ಕೆ ನುಗ್ಗಿ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಮುಂಡ್ಕೂರು ಗ್ರಾಮದ ದಡ್ಡು ಎಂಬಲ್ಲಿ ನಡೆದಿದೆ.
ಶ್ರೀಮತಿ ಎಂಬವರ ಮನೆಯ ಕಿಟಿಕಿಯ ಮೂಲಕ ಮನೆಯ ಹಿಂದಿನ ಬಾಗಿಲಿನ ಚಿಲಕವನ್ನು ತೆರೆದು ಒಳಪ್ರವೇಶಿಸಿದ ಕಳ್ಳರು, ಕಪಾಟಿನಲ್ಲಿದ್ದ ಒಟ್ಟು 92 ಗ್ರಾಂ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಲಾಗಿದೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- Advertisement -