Friday, May 17, 2024
Homeಕರಾವಳಿಬೆಳ್ತಂಗಡಿ; ಮನೆಯಲ್ಲಿಟ್ಟಿದ್ದ ಚಿನ್ನಾಭರಣ ಕಳ್ಳತನವಾಗಿರುವ ಘಟನೆ ಮುಂಡಾಜೆಯಲ್ಲಿ ನಡೆದಿದೆ.

ಬೆಳ್ತಂಗಡಿ; ಮನೆಯಲ್ಲಿಟ್ಟಿದ್ದ ಚಿನ್ನಾಭರಣ ಕಳ್ಳತನವಾಗಿರುವ ಘಟನೆ ಮುಂಡಾಜೆಯಲ್ಲಿ ನಡೆದಿದೆ.

spot_img
- Advertisement -
- Advertisement -

ಬೆಳ್ತಂಗಡಿ; ಮನೆಯಲ್ಲಿಟ್ಟಿದ್ದ ಚಿನ್ನಾಭರಣ ಕಳ್ಳತನವಾಗಿರುವ ಘಟನೆ ಮುಂಡಾಜೆಯಲ್ಲಿ ನಡೆದಿದೆ.ಮುಂಡಾಜೆ ಪ್ರಮೋದ್ ವಿ. ಭಿಡೆ (68) ಎಂಬವರ ಮನೆಯಲ್ಲಿ 05-07-2023 ರಂದು ಮನೆಯ ಸಾರಣೆ ಹಾಗೂ ಪೈಂಟಿಗ್‌ ಕೆಲಸವನ್ನು ಪ್ರಾರಂಭಿಸಲಾಗಿತ್ತು. ಕೆಲಸ ಪ್ರಾರಂಭ ಮಾಡುವ ಮುಂಚಿತವಾಗಿ ದಿನಾಂಕ: 03-07-2023 ರಂದು ಮನೆಯಲ್ಲಿದ್ದ ಚಿನ್ನಾಭರಣಗಳನ್ನು, ಅವರ ಪತ್ನಿ ಮನೆಯ ನೆಲಮಾಳಿಗೆಯಲ್ಲಿ ಇಟ್ಟಿದ್ದರು. ನೆಲಮಾಳಿಗೆಯಲ್ಲಿಟ್ಟಿದ್ದ ಚಿನ್ನಾಭರಣಗಳ ಕೋಣೆಗೆ ಬೀಗ ಹಾಕಿರಲಿಲ್ಲ. ಮನೆಯ ಕೆಲಸಕ್ಕೆ ಸುಮಾರು 10 ರಿಂದ 13 ಜನ ಕೆಲಸಕ್ಕೆಂದು ಬಂದಿದ್ದರು. ಕೆಲಸಗಾರರು ಕೆಲಸ ಮುಗಿಸಿ ಜುಲೈ 19ರಂದು ತೆರಳಿದ್ದರು.

ದಿನಾಂಕ: 12.09.2023 ರಂದು ಬೆಳಗ್ಗೆ  ಪ್ರಮೋದ್ ಭಿಡೆ ಹಾಗೂ ಅವರ ಪತ್ನಿ ಕಾರ್ಯಕ್ರಮಕ್ಕಾಗಿ ಆಭರಣ ಧರಿಸಿಕೊಳ್ಳಲು ಆಭರಣ ಇಟ್ಟಿದ್ದ ಸ್ಥಳಕ್ಕೆ ಹೋಗಿ ನೋಡಿದಾಗ, ಅಲ್ಲಿ ಇಡಲಾಗಿದ್ದ ಒಟ್ಟು 122 ಗ್ರಾಂ ಚಿನ್ನಾಭರಣಗಳು ಕಳವಾಗಿರುವುದು ಕಂಡು ಬಂದಿದೆ. ಕಳವಾದ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ 5 ಲಕ್ಷ ರೂಪಾಯಿ ಎಂದು ಅಂದಾಡಿಸಲಾಗಿದ್ದು ಧರ್ಮಸ್ಥಳ ಪೊಲೀಸ್ ದೂರು ನೀಡಿದ್ದಾರೆ.

- Advertisement -
spot_img

Latest News

error: Content is protected !!