Friday, May 17, 2024
Homeಕರಾವಳಿಮಂಗಳೂರು ನಗರವಾಸಿಗಳಿಗೊಂದು ಸೂಪರ್ ಸುದ್ದಿ; ನಗರದ ಸಮಸ್ಯೆ ಹೇಳಿ 10 ಸಾವಿರ ಬಹುಮಾನ ಗೆಲ್ಲಿ

ಮಂಗಳೂರು ನಗರವಾಸಿಗಳಿಗೊಂದು ಸೂಪರ್ ಸುದ್ದಿ; ನಗರದ ಸಮಸ್ಯೆ ಹೇಳಿ 10 ಸಾವಿರ ಬಹುಮಾನ ಗೆಲ್ಲಿ

spot_img
- Advertisement -
- Advertisement -

ಮಂಗಳೂರು:  ನಗರವಾಸಿಗಳಿಗೊಂದು ಸೂಪರ್‌ ಆಫರ್ ಇಲ್ಲಿದೆ. ಮಂಗಳೂರಿನ  ಸಮಸ್ಯೆ ಬಗ್ಗೆ ಬೆಳಕು ಚೆಲ್ಲಲು ಸ್ಪರ್ಧೆಯೊಂದನ್ನು ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಸಮಸ್ಯೆ ಪೋಸ್ಟ್ ಮಾಡಿದವರಿಗೆ ಬಹುಮಾನ ಸಿಗಲಿದೆ. ಈ ಕುರಿತ ಪೋಸ್ಟ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ನಗರ ವ್ಯಾಪ್ತಿಯಲ್ಲಿ ಸಮಸ್ಯೆ ಇರುವ ರಸ್ತೆ, ತೋಡು, ಒಳಚರಂಡಿ ಇತ್ಯಾದಿ ಯಾವುದೇ ಸಮಸ್ಯೆ ಇದ್ದರೂ ಅದರ ಬಗ್ಗೆ ಮೂರು ನಿಮಿಷಗಳ ವಿಡಿಯೊ ಮಾಡಿ, ನಿಮ್ಮ ಫೇಸ್‌ಬುಕ್‌ ಅಥವಾ ಇನ್‌ಸ್ಟಾಗ್ರಾಂನಲ್ಲಿ ಹಾಕಬೇಕು.

ವೈಯಕ್ತಿಕವಾಗಿ ಪೋಸ್ಟ್‌ ಮಾಡಿದಾಗ, ಅದನ್ನು ವೈಯಕ್ತಿಕ ಸ್ಪರ್ಧೆ ಎಂದು ಪರಿಗಣಿಸಲಾಗುವುದು. ಊರಿನವರು, ಸಂಸ್ಥೆ, ಗುಂಪಿನವರು ಭಾಗವಹಿಸಿದಾಗ ಅದನ್ನು ಗುಂಪು ಸ್ಪರ್ಧೆಯಲ್ಲಿ ಪರಿಗಣಿಸಲಾಗುವುದು. ಯಾರ ಪೋಸ್ಟ್‌ಗೆ ಹೆಚ್ಚು ಲೈಕ್ ಬಂದಿದೆಯೋ ಅವರಿಗೆ ಈ ಎರಡು ಪ್ರಶಸ್ತಿ ನೀಡಲಾಗುವುದು. ಯಾವುದೇ ವ್ಯಕ್ತಿ ನಿಂದನೆ, ಜಾತಿನಿಂದನೆ ಮಾಡಬಾರದು ಎಂದು ಪೋಸ್ಟ್‌ನಲ್ಲಿ ತಿಳಿಸಲಾಗಿದೆ.

ಸ್ಪರ್ಧೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 60 ವಾರ್ಡ್‌ಗಳಿಗೆ ಸೀಮಿತವಾಗಿದೆ. ಒಂದು ವಾರದಲ್ಲಿ ಯಾರ ಪೋಸ್ಟ್‌ಗೆ ಹೆಚ್ಚು ಲೈಕ್ ಬಂದಿದೆ ಎಂಬುದನ್ನು ಪರಿಗಣಿಸಿ ಗುಂಪು ಸ್ಪರ್ಧೆಗೆ ಪ್ರಥಮ 10 ಸಾವಿರ, ದ್ವಿತೀಯ 5,000, ಗುಂಪು ಸ್ಪರ್ಧೆಗೆ ಪ್ರಥಮ 10 ಸಾವಿರ, ದ್ವಿತೀಯ 5,000, ವೈಯಕ್ತಿಕ ಪ್ರಥಮ 5,000, ದ್ವಿತೀಯ 2,500 ಬಹುಮಾನ ನೀಡಲಾಗುತ್ತದೆ.

ಸಾಮಾಜಿಕ ಜಾಲತಾಣಕ್ಕೆ ಅಪ್‌ಲೋಡ್ ಮಾಡಿದ ವಿಡಿಯೊವನ್ನು ಈ ಮೊಬೈಲ್ ಫೋನ್ ಸಂಖ್ಯೆಗೆ 99166 91455 ಕಳುಹಿಸಬೇಕು ಎಂದು ಈ ವಿನೂತನ ಜಾಗೃತಿ ಸ್ಪರ್ಧೆ ಹಮ್ಮಿಕೊಂಡಿರುವ ಬಂಧುತ್ವ ಸಂಘಟನೆ ತಿಳಿಸಿದೆ.

- Advertisement -
spot_img

Latest News

error: Content is protected !!