- Advertisement -
- Advertisement -
ಬೆಂಗಳೂರು: ಎಸ್ಎಸ್ಎಲ್ಸಿ ಫಲಿತಾಂಶದ ನಿರೀಕ್ಷೆಯಲ್ಲಿರುವವರಿಗೆ ಸಿಹಿ ಸುದ್ದಿಯೊಂದು ಕಾದಿದೆ. ಪರೀಕ್ಷೆ ಬರೆದ ವಿದ್ಯಾರ್ಥಿಗಳು ಫೇಲಾಗುವುದನ್ನು ಕಡಿಮೆ ಮಾಡಲು ಶೇ. 10ರಷ್ಟು ಕೃಪಾಂಕ ನೀಡಲಾಗುತ್ತದೆ. 3 ವಿಷಯಗಳಿಗೆ ಒಟ್ಟು ಶೇ.10ರಷ್ಟು ಅಂಕ ನೀಡಲಾಗುವುದು. ಕೆಲವೇ ಅಂಕಗಳಿಂದ ಫೇಲಾಗುವ ವಿದ್ಯಾರ್ಥಿಗಳಿಗೆ ಶ್ರೀರಕ್ಷೆ ನೀಡಲು ಸರ್ಕಾರ ನಿರ್ಧರಿಸಿದೆ.
ಫೇಲಾದ ಯಾವುದಾದರೂ 3 ವಿಷಯಗಳ ಥಿಯರಿ ಪರೀಕ್ಷೆಯ ಒಟ್ಟು ಅಂಕಗಳ ಶೇ. 10ರಷ್ಟು ಗ್ರೇಸ್ ಮಾರ್ಕ್ ಗಳನ್ನು ಅಗತ್ಯಕ್ಕೆ ಅನುಗುಣವಾಗಿ ಹಂಚಿಕೆ ಮಾಡಿದಾಗ ವಿದ್ಯಾರ್ಥಿ ಉತ್ತೀರ್ಣರಾಗುವುದಾದರೆ ಮಾತ್ರ ಇದರ ಪ್ರಯೋಜನ ಸಿಗಲಿದೆ ಎಂದು ಹೇಳಲಾಗಿದೆ.
- Advertisement -