ಚಿತ್ರದುರ್ಗ: ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಬಿಜೆಪಿಗೆ ಶಾಕ್ ಮೇಲೆ ಶಾಕ್ ಎದುರಾಗುತ್ತೆ ಇದೆ. ಇದೀಗ ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ಬಿಜೆಪಿ ತೊರೆಯಲು ಸಿದ್ಧರಾಗಿದ್ದಾರೆ.
ಈ ಬಾರಿ ವಿಧಾನಸಭಾ ಚುನಾವಣೆಗೆ ಅವರಿಗೆ ಟಿಕೆಟ್ ನೀಡಿಲ್ಲ. ಈ ಕಾರಣದಿಂದಾಗಿ ಸಿಡಿದೆದ್ದಿರುವಂತ ಅವರು ಬಿಜೆಪಿ ಪಕ್ಷ ತೊರೆಯುವುದಾಗಿ ಹೇಳಿದ್ದಾರೆ.ಅಲ್ಲದೇ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿಯೂ ಘೋಷಿಸಿದ್ದಾರೆ.
ಹೊಸದುರ್ಗ ಕ್ಷೇತ್ರದ ಹಾಲಿ ಶಾಸಕ ಗೂಳಿಹಟ್ಟಿ ಶೇಖರ್ ಅವರಿಗೆ ಈ ಬಾರಿಯ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ನೀಡಿಲ್ಲ. ಇವರ ಬದಲಾಗಿ ಲಿಂಗಮೂರ್ತಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಇದರಿಂದ ಅಸಮಾಧಾನಗೊಂಡಿರುವಂತ ಅವರು, ಬಿಜೆಪಿಗೆ ಗುಡ್ ಬೈ ಹೇಳುವುದಾಗಿ ತಿಳಿಸಿದ್ದಾರೆ.
ಈ ಸಂಬಂಧ ಇಂದು ತಮ್ಮ ಆಪ್ತರು ಮತ್ತು ಬೆಂಬಲಿಗರೊಂದಿಗೆ ಸಭೆ ನಡೆಸಿದ ಬಳಿಕ, ಈ ತೀರ್ಮಾನವನ್ನು ಪ್ರಕಟಿಸಿದ್ದಾರೆ. ಇದಲ್ಲದೇ ನಾನು ಬಂಡಾಯ ಇಲ್ಲವೇ ಜನಾರ್ಧನ ರೆಡ್ಡಿ ನೇತೃತ್ವದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾರೆ.