ಮೂಡಬಿದಿರೆ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೋರಿ ಆಯೋಜಿಸಲಾಗಿದೆ.
ಜಾಂಬೋರಿಗೆ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬುಧವಾರ ಚಾಲನೆ ನೀಡಿದರು. ಈ ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ದೇಶದ ಸಾವಿರಾರು ಸ್ಕೌಟ್ಸ್, ಗೈಡ್ಸ್, ರೋವರ್ಸ್, ರೇಂಜರ್ಗಳು, ವಿದ್ಯಾರ್ಥಿಗಳು ಮತ್ತು ಘಟಕದ ನಾಯಕರು ಮತ್ತು ಇತರ ದೇಶಗಳ ಪ್ರಜೆಗಳು ಭಾಗವಹಿಸುತ್ತಿದ್ದಾರೆ.
ಡಿಸೆಂಬರ್ 21 ರಿಂದ 7 ದಿನಗಳವರೆಗೆ ನಡೆಯಲಿರುವ ಜಾಂಬೋರಿಯಲ್ಲಿ ದೇಶ ಮತ್ತು ರಾಜ್ಯದ ಶ್ರೀಮಂತ ಐತಿಹಾಸಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಅನೇಕ ಕಲಾವಿದರು ಪ್ರದರ್ಶಿಸುತ್ತಿದ್ದಾರೆ.
ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸಂಸದ ಡಾ. ಡಿ. ವೀರೇಂದ್ರ ಹೆಗ್ಗಡೆ, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಉಮಾನಾಥ್ ಕೋಟ್ಯಾನ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧಿಯಾ, ವಿಶ್ವ ಸಂಸ್ಥೆಯ ಸ್ಕೌಟ್ ಆಂದೋಲನದ ಪ್ರಧಾನ ಕಾರ್ಯದರ್ಶಿ ಅಹ್ಮದ್ ಅಲ್ಹೆಂದವಿ ಮತ್ತು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ ಉಪಸ್ಥಿತರಿದ್ದರು.