- Advertisement -
- Advertisement -
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ ಇಂದು ಭೇಟಿ ನೀಡಿದ್ದಾರೆ.
ಪತ್ನಿ ಅನಿತಾ ಗೆಹ್ಲೋಟ್ ಸೇರಿದಂತೆ ಕುಟುಂಬ ಸಮೇತ ಇಂದು ಭೇಟಿ ನೀಡಿ ರಾಜ್ಯಪಾಲರು ಪೂಜೆ ಸಲ್ಲಿಸಿದ್ದಾರೆ. ರಾಜ್ಯಪಾಲರ ಭೇಟಿ ವೇಳೆ ಸಚಿವ ಎಸ್. ಅಂಗಾರ ಉಪಸ್ಥಿತರಿದ್ದರು. ಈ ವೇಳೆ ರಾಜ್ಯಪಾಲರಿಗೆ ಗೌರವ ವಂದನೆ ಸಲ್ಲಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ಬಳಿಕ ರಾಜ್ಯಪಾಲರು ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಜೊತೆ ಚರ್ಚೆ ನಡೆಸಲಿದ್ದಾರೆ.
- Advertisement -