- Advertisement -
- Advertisement -
ಬೆಂಗಳೂರು: ನಾಲ್ಕು ಚಕ್ರದ ವೈಯಕ್ತಿಕ ವಾಹನ ಹೊಂದಿರುವ ಅಂತ್ಯೋದಯ ಅನ್ನ/ ಆದ್ಯತಾ ಪಡಿತರ ಚೀಟಿಗಳನ್ನು ಆದ್ಯತೇತರ ಪಡಿತರ ಚೀಟಿಗಳಾಗಿ ಪರಿವರ್ತಿಸುವ ವಿಚಾರದಲ್ಲಿ ತನ್ನ ಆದೇಶವನ್ನು ರಾಜ್ಯ ಸರ್ಕಾರ ತಡೆ ಹಿಡಿದಿದೆ.
ನಾಲ್ಕು ಚಕ್ರದ ವಾಹನ ಹೊಂದಿರುವ ಬಿಪಿಎಲ್ ಕಾರ್ಡ್ ದಾರರ ಕಾರ್ಡ್ ಗಳನ್ನು ರದ್ದುಪಡಿಸುವ ಮತ್ತು ದಂಡ ವಿಧಿಸುವ ಕುರಿತ ಆದೇಶವನ್ನು ತಡೆಹಿಡಿಯಲಾಗಿದೆ.
ಈ ಸಂಬಂಧ ವರದಿ ನೀಡುವಂತೆ ಎಲ್ಲಾ ಡಿಸಿಗಳು ಮತ್ತು ಆಹಾರ ಇಲಾಖೆ ಜಂಟಿ ನಿರ್ದೇಶಕರಿಗೆ ಆಹಾರ ಇಲಾಖೆಯಿಂದ ಸೂಚನೆ ನೀಡಲಾಗಿತ್ತು.
ಇಂದು ಆದೇಶವನ್ನು ತಡೆ ಹಿಡಿದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
- Advertisement -