- Advertisement -
- Advertisement -
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸುವ ಬಗ್ಗೆ ರಾಜ್ಯ ಸರ್ಕಾರ ಹೊರಡಿಸಿದ್ದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.
ಈ ಕುರಿತು ಅಧಿಕೃತವಾದ ವಿಶೇಷ ರಾಜ್ಯಪತ್ರವನ್ನು ಪ್ರಕಟಿಸಲಾಗಿದೆ.
ಇದರಿಂದ ಇನ್ನು ಮುಂದೆ ಅನುಸೂಚಿತ ಜಾತಿಯ ಮೀಸಲಾತಿ ಪ್ರಮಾಣ ಶೇಕಡ 15 ರಿಂದ 17 ಕ್ಕೆ ಏರಲಿದ್ದು, ಅನುಸೂಚಿತ ಪಂಗಡಗಳ ಮೀಸಲಾತಿ ಪ್ರಮಾಣ ಶೇಕಡಾ 3 ರಿಂದ 7 ಕ್ಕೆ ಏರಿಸಲಾಗಿದೆ.
ಈ ಮೂಲಕ ಅನುಸೂಚಿತ ಜಾತಿ ಮತ್ತು ಪಂಗಡಗಳ ಜನಾಂಗಕ್ಕೆ ರಾಜ್ಯ ಸರ್ಕಾರ ದೀಪಾವಳಿ ಕೊಡುಗೆ ಕೊಟ್ಟಂತಾಗಿದೆ.
ಸುಗ್ರೀವಾಜ್ಞೆಗೆ ಮುಂದಿನ ಡಿಸೆಂಬರ್ ನಲ್ಲಿ ರಾಜ್ಯ ಸರ್ಕಾರ ವಿಧಾನ ಮಂಡಲದ ಎರಡೂ ಸದನದಲ್ಲಿ ವಿಧೇಯಕ ಮಂಡಿಸಿ ಒಪ್ಪಿಗೆ ಪಡೆಯಬೇಕಿದೆ.
- Advertisement -