Sunday, May 12, 2024
Homeಕರಾವಳಿಉಡುಪಿಆ.25 ರಂದು ಉಡುಪಿಯ ಜಿಲ್ಲೆಯ ರಜತ ಮಹೋತ್ಸವದ ಉದ್ಘಾಟನೆ ಸಮಾರಂಭ; ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ರಾಜ್ಯಪಾಲ ಥಾವರ್‌ಚಂದ್‌...

ಆ.25 ರಂದು ಉಡುಪಿಯ ಜಿಲ್ಲೆಯ ರಜತ ಮಹೋತ್ಸವದ ಉದ್ಘಾಟನೆ ಸಮಾರಂಭ; ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್

spot_img
- Advertisement -
- Advertisement -

ಉಡುಪಿ : ಆ.25 ರಂದು ಉಡುಪಿಯ ಜಿಲ್ಲೆಯ ರಜತ ಮಹೋತ್ಸವದ ಉದ್ಘಾಟನೆ ಸಮಾರಂಭ ನಡೆಯಲಿದೆ. ಕಾರ್ಯಕ್ರಮದಲ್ಲಿ ಥಾವರ್‌ಚಂದ್‌ ಗೆಹ್ಲೋಟ್ ಆಗಮಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಅಂಗಾರ ಹೇಳಿದ್ದಾರೆ.

ಜಿಲ್ಲೆಯ ರಜತ ಮಹೋತ್ಸವ ಆಚರಣೆ ಹಿನ್ನೆಲೆಯಲ್ಲಿ ಪ್ರತ್ಯೇಕ ಸಮಿತಿಯನ್ನು ರಚಿಸಿದ್ದೇವೆ ಮತ್ತು ಜವಾಬ್ದಾರಿಗಳನ್ನು ಹಂಚಿದ್ದೇವೆ. ಆ ಸಮಿತಿಗಳು ಪ್ರತ್ಯೇಕವಾಗಿ ಸಭೆ ಸೇರಿ ಏನೇನು ಮಾಡಬೇಕು ಮತ್ತು ಜಿಲ್ಲಾಡಳಿತದಿಂದ ಏನಾಗ ಬೇಕು ಎಂಬುದರ ಚರ್ಚೆ ನಡೆಸಿ, ಕಾರ್ಯಕ್ರಮ ಅನುಷ್ಠಾನ ಮಾಡಲಿದ್ದೇವೆ. ಸ್ಥಳೀಯ ಶಾಸಕರು ಉಸ್ತುವಾರಿ ನೋಡಿ ಕೊಳ್ಳಲಿದ್ದಾರೆ ಅವರು ತಿಳಿಸಿದ್ದಾರೆ.


ಜಿಲ್ಲೆ ರಜತ ಮಹೋತ್ಸವದ ಸಂಭ್ರಮದಲ್ಲಿದೆ. ಅಮೃತ ಮಹೋತ್ಸವದ ಈ ಸಂದರ್ಭ ರಜತಾದ್ರಿಯ ಜಿಲ್ಲಾಧಿಕಾರಿ ಸಂಕೀರ್ಣವನ್ನು ವಿದ್ಯುದ್ದೀಪಾಲಂಕಾರದ ಜತೆಗೆ ಸುಣ್ಣ-ಬಣ್ಣ ಬಳಿದು ದುರಸ್ತಿ ಮಾಡಬೇಕಿತ್ತು. ಆದರೆ ಸಾಧ್ಯವಾಗಿಲ್ಲ. 3 ಕೋ.ರೂ. ಅನುದಾನದ ಪ್ರಸ್ತಾವನೆ ಸಿದ್ಧಪಡಿಸಿದ್ದೆವು ಎಂದಿದ್ದಾರೆ.

- Advertisement -
spot_img

Latest News

error: Content is protected !!