ಬೆಂಗಳೂರು : ಕೊರೊನಾದಿಂದಾಗಿ ಕಳೆದೊಂದು ವರ್ಷದಿಂದ ಬಂದ್ ಆಗಿದ್ದ ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ಸುಪ್ರೀಂಕೋರ್ಟ್ ನಿರ್ದೇಶನದಂತೆ ಅಂಗನವಾಡಿ ಕೇಂದ್ರಗಳನ್ನು ಕೂಡಲೇ ಪ್ರಾರಂಭಿಸಿ 3 ರಿಂದ 6 ವರ್ಷದ ಮಕ್ಕಳಿಗೆ ಶಾಲಾ ಪೂರ್ವ ಶಿಕ್ಷಣ ನೀಡಲು ಕ್ರಮ ಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಎಲ್ಲಾ 30 ಜಿಲ್ಲಾ ಉಪ ನಿರ್ದೇಶಕರುಗಳಿಗೆ ಸೂಚನೆ ನೀಡಿದೆ.
ಸುಪ್ರೀಂಕೋರ್ಟ್ ಇತ್ತೀಚೆಗೆ ಅಂಗನವಾಡಿ ಕೇಂದ್ರಗಳನ್ನು 2021 ರ ಜನವರಿ 31 ರೊಳಗೆ ಪ್ರಾರಂಭಿಸುವಂತೆ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಜನವರಿ 13 ರಂದು ನಿರ್ದೇಶನ ನೀಡಿತ್ತು. ಹೀಗಾಗಿ ಶೀಘ್ರವೇ ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ರಾಜ್ಯ ಸರ್ಕಾರದಿಂದ ಮಾರ್ಗಸೂಚಿ
*ಗ್ರಾಮಪಂಚಾಯಿತಿ ಮೂಲಕ ಅಂಗನವಾಡಿ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡುವುದು
ಆರ್ ಟಿಪಿಸಿಆರ್ ಟೆಸ್ಟ್ ಮಾಡಿಸಕೊಳ್ಳೋದು ಕಡ್ಡಾಯ
*ಶೌಚಾಲಯ ಶುಚಿಗೊಳಿಸುವುದು
*3 ವರ್ಷದೊಳಗಿನ ಮಕ್ಕಳು, ಗರ್ಭಿಣಿಯರು ಅಂಗನವಾಡಿಗೆ ಭೇಟಿ ನೀಡದಂತೆ ನೋಡಿಕೊಳ್ಳುವುದು
*ಕನಿಷ್ಟ 5 ಮಕ್ಕಳು ಇರುವುದಂತೆ ನೋಡಿಕೊಳ್ಳುವುದು
*ಮಕ್ಕಳಿಗೆ ಪೋಷಕರ ಅನುಮತಿ ಪತ್ರ ಕಡ್ಡಾಯ
*ಮಕ್ಕಳಿಗೆ ಮಾಸ್ಕ್ ಕಡ್ಡಾಯ
*ಮಕ್ಕಳು ದೈಹಿಕ ಅಂತರ ಕಾಪಾಡಿಕೊಳ್ಳುವಂತೆ ನೋಡಿಕೊಳ್ಳುವುದು
*ಮಕ್ಕಳಿಗೆ ಕೆಮ್ಮು ಜ್ವರ, ಗಂಟಲು ನೋವಿನ ಲಕ್ಷಣ ಇದ್ದರೆ ಹತ್ತಿರದ ಸರ್ಕಾರಿ ವೈದ್ಯರಿಗೆ ತೋರಿಸಬೇಕು