- Advertisement -
- Advertisement -
ಚಿಕ್ಕಮಗಳೂರು : ಅಂಗಾಂಗ ದಾನ ಮಾಡಿ 9 ಮಂದಿಯ ಬದುಕಿನಲ್ಲಿ ಹೊಸ ಬೆಳಕು ಮೂಡಿಸಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದ ಚಿಕ್ಕಮಗಳೂರು ಜಿಲ್ಲೆಯ ಯುವತಿ ರಕ್ಷಿತಾ ಕುಟುಂಬಕ್ಕೆ 8 ಲಕ್ಷ ಪರಿಹಾರ ಸಿಕ್ಕಿದೆ.
ಇಂದು ರಕ್ಷಿತಾ ಕುಟುಂಬಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ 8 ಲಕ್ಷದ ಪರಿಹಾರದ ಚೆಕ್ ವಿತರಿಸಿದ್ದಾರೆ. ಸರ್ಕಾರದಿಂದ 5 ಲಕ್ಷ, ಭೈರತಿ ಬಸವರಾಜ್ ವೈಯಕ್ತಿಕವಾಗಿ 2 ಲಕ್ಷ, ತಾಂಡಾ ನಿಗಮದಿಂದ 1 ಲಕ್ಷದ ಚೆಕ್ ವಿತರಿಸಲಾಗಿದೆ.
ಸಾರಿಗೆ ಬಸ್ ನಿರ್ವಾಹಕನ ಬೇಜವಾಬ್ದಾರಿತನದಿಂದ ಬಸ್ ನಿಂದ ಬಿದ್ದು ಮೃತಪಟ್ಟಂತಹ ಯುವತಿಯ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದರು.
ಚಿಕ್ಕಮಗಳೂರಿನ ಬಸವನಹಳ್ಳಿ ಸರ್ಕಾರಿ ಪಿಯು ಕಾಲೇಜಿನಲ್ಲಿ ರಕ್ಷಿತಾ ವ್ಯಾಸಂಗ ಮಾಡುತ್ತಿದ್ದಳು. ಯುವತಿ ರಕ್ಷಿತಾ ಬಸ್ನಿಂದ ಕೆಳಗೆ ಬಿದ್ದು ಮೆದುಳು ಸಂಪೂರ್ಣ ನಿಷ್ಕ್ರಿಯವಾಗಿತ್ತು. ಬಸ್ ಕಂಡಕ್ಟರ್ ನಿರ್ಲಕ್ಷ್ಯಕ್ಕೆ ಯುವತಿ ಬಲಿಯಾಗಿದ್ದಾಳೆ ಎಂಬ ಗಂಭೀರ ಆರೋಪ ಕೂಡ ಕೇಳಿಬಂದಿತ್ತು.
- Advertisement -