- Advertisement -
- Advertisement -
ಉಡುಪಿ: ಕಂಠಪೂರ್ತಿ ಕುಡಿದು ಶಾಲೆಯಲ್ಲೇ ಸರ್ಕಾರಿ ಶಾಲೆಯ ಶಿಕ್ಷಕ ನಿದ್ದೆಗೆ ಜಾರಿದ ಘಟನೆ ಉಡುಪಿಯ ಘಟನೆ ಪೆರ್ಡೂರು ಗ್ರಾಮದ ಅಲಂಗಾರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಶಾಲೆಯ ಶಿಕ್ಷಕರಾದ ಕೃಷ್ಣಮೂರ್ತಿ ಕಂಠಪೂರ್ತಿ ಕುಡಿದು ಜಗಲಿಯಲ್ಲೇ ಮಲಗಿದ್ದಾರೆ. ಮಕ್ಕಳ ಭವಿಷ್ಯ ರೂಪಿಸಬೇಕಾದ ಶಿಕ್ಷಕನೇ ಹೀಗಾದರೆ ಮಕ್ಕಳ ಭವಿಷ್ಯದ ಕಥೆಯನು ಎಂದು ಗ್ರಾಮಸ್ಥರು ಪ್ರಶ್ನಿಸುತ್ತಿದ್ದಾರೆ.
ಶಿಕ್ಷಕನ ಅವಾಂತರವನ್ನು ವಿಡಿಯೋ ಮಾಡಿದ ಸ್ಥಳೀಯರು ಶಿಕ್ಷಕನನ್ನು ಕೂಡಲೇ ಅಮಾನತು ಮಾಡುವಂತೆ ಆಗ್ರಹಿಸಿದ್ದಾರೆ. ಸ್ಥಳೀಯ ಗ್ರಾಮ ಪಂಚಾಯತ್ ಅಧ್ಯಕ್ಷ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
- Advertisement -