- Advertisement -
- Advertisement -
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಸುಮಾರು 74.30 ಕಿಲೋ ಮೀಟರ್ ರಸ್ತೆ ನವೀಕರಣ ಮತ್ತು ಮೇಲ್ದರ್ಜೆಗೆ ಏರಿಸಲು ಕೇಂದ್ರ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿದೆ.
ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ – ಉಪ್ಪಿನಂಗಡಿ ಹತ್ತು ಕಿಲೋ ಮೀಟರ್ ರಸ್ತೆ ಕಾಮಗಾರಿಗಳಿಗೆ ಆರು ಕೋಟಿ ರೂಪಾಯಿ ಬಿಡುಗಡೆಯಾಗಿದೆ.ಮಾಣಿ – ಉಳ್ಳಾಲ ರಾಜ್ಯ ಹೆದ್ದಾರಿಯಲ್ಲಿ 5.7 ಕಿಲೋ ಮೀಟರ್ ರಸ್ತೆ ನವೀಕರಣಕ್ಕೆ 3.42 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ.
ಅಲ್ಲದೇ, ಸಂಪಿಗೆ – ಅಶ್ವಥಪುರ – ನೀರ್ಕೆರೆ – ಮಿಜಾರು 6.5 ಕಿಲೋ ಮೀಟರ್ ಜಿಲ್ಲಾ ರಸ್ತೆ ಅಭಿವೃದ್ಧಿಗೆ ಮೂರು ಕೋಟಿ ರೂಪಾಯಿ ಸೇರಿದಂತೆ ಒಟ್ಟು 16 ವಿವಿಧ ರಸ್ತೆಗಳ ಅಭಿವೃದ್ಧಿ ಅನುದಾನ ಬಿಡುಗಡೆಯಾಗಿದೆ.
ಕೇಂದ್ರ ರಸ್ತೆ ಮತ್ತು ಮೂಲ ಸೌಕರ್ಯ ನಿಧಿ ಅಡಿಯಲ್ಲಿ ಅನುದಾನ ಬಿಡುಗಡೆ ಮಾಡಲಾಗಿದ್ದು, ಕೇಂದ್ರ ಸರ್ಕಾರಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅಭಿನಂದನೆ ಸಲ್ಲಿಸಿದ್ದಾರೆ.
- Advertisement -